ಧಾರವಾಡದ ನೃಪತುಂಗ ಬೆಟ್ಟ ಉದ್ಯಾನ ಪ್ರವೇಶ ಶುಲ್ಕದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ, ಪ್ರಥಮ ದರ್ಜೆ ಸಹಾಯಕರೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಹುಬ್ಬಳ್ಳಿ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವನಾಥ ಮಹಾಜನ ಎಂಬವರ ವಿರುದ್ಧ ಈ ಕ್ರಮ ಜರುಗಿದೆ.
2024ರ ಮಾರ್ಚ್ 1ರಿಂದ 2025ರ ಜನವರಿ 31ರವರೆಗೆ ಉದ್ಯಾನ ಪ್ರವೇಶ ಶುಲ್ಕವಾಗಿ ಒಟ್ಟು ₹15.57 ಲಕ್ಷ ಸಂಗ್ರಹವಾಗಿದ್ದು, ಅದರಲ್ಲಿಯೂ ಕೇವಲ ₹8.95 ಲಕ್ಷವನ್ನು ಮಾತ್ರ ಸರ್ಕಾರದ ಖಾತೆಗೆ ಜಮಾ ಮಾಡಲಾಗಿತ್ತು. ಉಳಿದ ₹6.62 ಲಕ್ಷ ಹಣದ ಬಗ್ಗೆ ಲೆಕ್ಕಪತ್ರ ಸ್ಪಷ್ಟವಾಗದ ಹಿನ್ನೆಲೆ, ತನಿಖೆ ಆರಂಭಿಸಲಾಯಿತು.
ವಿಶ್ವನಾಥ ಮಹಾಜನ ಅವರು ಧಾರವಾಡ ವಲಯ ಅರಣ್ಯಾಧಿಕಾರಿ ಕಚೇರಿಯ ನಿರ್ವಹಣಾ ಹೊಣೆ ಹೊತ್ತಿದ್ದರು. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿದ ಬಗ್ಗೆ ಅವರು ನೋಂದಣಿ ಪುಸ್ತಕದಲ್ಲಿ ಸಹಿ ಹಾಕಿದ್ದರೂ, ದಾಖಲೆ ಪರಿಶೀಲನೆ ವೇಳೆ ಹಣ ದುರ್ಬಳಕೆಯಾದ ಬಗ್ಗೆ ಸ್ಪಷ್ಟತೆ ಲಭಿಸಿದೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.
ಪ್ರಕರಣದ ಸಂಬಂಧ ಇಲಾಖಾ ತನಿಖೆ ನಡೆಸಿದ ಅಧಿಕಾರಿಗಳು, ವಿವಿಧ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಹಣ ದುರ್ಬಳಕೆ ಪ್ರಕರಣ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳ ಉಲ್ಲಂಘನೆಯಡಿ ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯತೀಶಕುಮಾರ್ ಅವರು ಏಪ್ರಿಲ್ 21 ರಂದು ವಿಶ್ವನಾಥ ಮಹಾಜನ ಅವರನ್ನು ಅಮಾನತುಗೊಳಿಸುವ ಆದೇಶ ಹೊರಡಿಸಿದ್ದಾರೆ.
ಸದ್ಯ ಪ್ರಕರಣ ಸಂಬಂಧ ಆಂತರಿಕ ತನಿಖೆಯೂ ಮುಂದುವರೆದಿದ್ದು, ಹಣದ ಲೆಕ್ಕಾಚಾರ ಹಾಗೂ ಇನ್ನಿತರ ನಿಖರ ಮಾಹಿತಿಗಾಗಿ ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…