ಧಾರವಾಡದ ನೃಪತುಂಗ ಬೆಟ್ಟ ಉದ್ಯಾನ ಪ್ರವೇಶ ಶುಲ್ಕದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ, ಪ್ರಥಮ ದರ್ಜೆ ಸಹಾಯಕರೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಹುಬ್ಬಳ್ಳಿ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವನಾಥ ಮಹಾಜನ ಎಂಬವರ ವಿರುದ್ಧ ಈ ಕ್ರಮ ಜರುಗಿದೆ.
2024ರ ಮಾರ್ಚ್ 1ರಿಂದ 2025ರ ಜನವರಿ 31ರವರೆಗೆ ಉದ್ಯಾನ ಪ್ರವೇಶ ಶುಲ್ಕವಾಗಿ ಒಟ್ಟು ₹15.57 ಲಕ್ಷ ಸಂಗ್ರಹವಾಗಿದ್ದು, ಅದರಲ್ಲಿಯೂ ಕೇವಲ ₹8.95 ಲಕ್ಷವನ್ನು ಮಾತ್ರ ಸರ್ಕಾರದ ಖಾತೆಗೆ ಜಮಾ ಮಾಡಲಾಗಿತ್ತು. ಉಳಿದ ₹6.62 ಲಕ್ಷ ಹಣದ ಬಗ್ಗೆ ಲೆಕ್ಕಪತ್ರ ಸ್ಪಷ್ಟವಾಗದ ಹಿನ್ನೆಲೆ, ತನಿಖೆ ಆರಂಭಿಸಲಾಯಿತು.
ವಿಶ್ವನಾಥ ಮಹಾಜನ ಅವರು ಧಾರವಾಡ ವಲಯ ಅರಣ್ಯಾಧಿಕಾರಿ ಕಚೇರಿಯ ನಿರ್ವಹಣಾ ಹೊಣೆ ಹೊತ್ತಿದ್ದರು. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿದ ಬಗ್ಗೆ ಅವರು ನೋಂದಣಿ ಪುಸ್ತಕದಲ್ಲಿ ಸಹಿ ಹಾಕಿದ್ದರೂ, ದಾಖಲೆ ಪರಿಶೀಲನೆ ವೇಳೆ ಹಣ ದುರ್ಬಳಕೆಯಾದ ಬಗ್ಗೆ ಸ್ಪಷ್ಟತೆ ಲಭಿಸಿದೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.
ಪ್ರಕರಣದ ಸಂಬಂಧ ಇಲಾಖಾ ತನಿಖೆ ನಡೆಸಿದ ಅಧಿಕಾರಿಗಳು, ವಿವಿಧ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಹಣ ದುರ್ಬಳಕೆ ಪ್ರಕರಣ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳ ಉಲ್ಲಂಘನೆಯಡಿ ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯತೀಶಕುಮಾರ್ ಅವರು ಏಪ್ರಿಲ್ 21 ರಂದು ವಿಶ್ವನಾಥ ಮಹಾಜನ ಅವರನ್ನು ಅಮಾನತುಗೊಳಿಸುವ ಆದೇಶ ಹೊರಡಿಸಿದ್ದಾರೆ.
ಸದ್ಯ ಪ್ರಕರಣ ಸಂಬಂಧ ಆಂತರಿಕ ತನಿಖೆಯೂ ಮುಂದುವರೆದಿದ್ದು, ಹಣದ ಲೆಕ್ಕಾಚಾರ ಹಾಗೂ ಇನ್ನಿತರ ನಿಖರ ಮಾಹಿತಿಗಾಗಿ ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…