ಧಾರವಾಡದ ನೃಪತುಂಗ ಬೆಟ್ಟ ಉದ್ಯಾನ ಪ್ರವೇಶ ಶುಲ್ಕದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ, ಪ್ರಥಮ ದರ್ಜೆ ಸಹಾಯಕರೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಹುಬ್ಬಳ್ಳಿ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವನಾಥ ಮಹಾಜನ ಎಂಬವರ ವಿರುದ್ಧ ಈ ಕ್ರಮ ಜರುಗಿದೆ.
2024ರ ಮಾರ್ಚ್ 1ರಿಂದ 2025ರ ಜನವರಿ 31ರವರೆಗೆ ಉದ್ಯಾನ ಪ್ರವೇಶ ಶುಲ್ಕವಾಗಿ ಒಟ್ಟು ₹15.57 ಲಕ್ಷ ಸಂಗ್ರಹವಾಗಿದ್ದು, ಅದರಲ್ಲಿಯೂ ಕೇವಲ ₹8.95 ಲಕ್ಷವನ್ನು ಮಾತ್ರ ಸರ್ಕಾರದ ಖಾತೆಗೆ ಜಮಾ ಮಾಡಲಾಗಿತ್ತು. ಉಳಿದ ₹6.62 ಲಕ್ಷ ಹಣದ ಬಗ್ಗೆ ಲೆಕ್ಕಪತ್ರ ಸ್ಪಷ್ಟವಾಗದ ಹಿನ್ನೆಲೆ, ತನಿಖೆ ಆರಂಭಿಸಲಾಯಿತು.
ವಿಶ್ವನಾಥ ಮಹಾಜನ ಅವರು ಧಾರವಾಡ ವಲಯ ಅರಣ್ಯಾಧಿಕಾರಿ ಕಚೇರಿಯ ನಿರ್ವಹಣಾ ಹೊಣೆ ಹೊತ್ತಿದ್ದರು. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿದ ಬಗ್ಗೆ ಅವರು ನೋಂದಣಿ ಪುಸ್ತಕದಲ್ಲಿ ಸಹಿ ಹಾಕಿದ್ದರೂ, ದಾಖಲೆ ಪರಿಶೀಲನೆ ವೇಳೆ ಹಣ ದುರ್ಬಳಕೆಯಾದ ಬಗ್ಗೆ ಸ್ಪಷ್ಟತೆ ಲಭಿಸಿದೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.
ಪ್ರಕರಣದ ಸಂಬಂಧ ಇಲಾಖಾ ತನಿಖೆ ನಡೆಸಿದ ಅಧಿಕಾರಿಗಳು, ವಿವಿಧ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಹಣ ದುರ್ಬಳಕೆ ಪ್ರಕರಣ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳ ಉಲ್ಲಂಘನೆಯಡಿ ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯತೀಶಕುಮಾರ್ ಅವರು ಏಪ್ರಿಲ್ 21 ರಂದು ವಿಶ್ವನಾಥ ಮಹಾಜನ ಅವರನ್ನು ಅಮಾನತುಗೊಳಿಸುವ ಆದೇಶ ಹೊರಡಿಸಿದ್ದಾರೆ.
ಸದ್ಯ ಪ್ರಕರಣ ಸಂಬಂಧ ಆಂತರಿಕ ತನಿಖೆಯೂ ಮುಂದುವರೆದಿದ್ದು, ಹಣದ ಲೆಕ್ಕಾಚಾರ ಹಾಗೂ ಇನ್ನಿತರ ನಿಖರ ಮಾಹಿತಿಗಾಗಿ ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…