ಚಿಕ್ಕಬಳ್ಳಾಪುರ, ಮೇ 30: ತಿಪ್ಪೇನಹಳ್ಳಿಯ ಸಮೀಪದಲ್ಲಿರುವ ಮಕ್ಕಳ ಆಸರೆ ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಇದೀಗ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ವಾರ್ಡನ್ ಕಿರುಕುಳದಿಂದ ತೊಂದರೆಗೆ ಒಳಗಾದ ಕಾರಣವಾಗಿ ಅವರು ವಸತಿ ನಿಲಯದಿಂದ ಹೊರಡಿದ್ದಾಗಿ ಬಾಲಕಿಯರು ತಿಳಿಸಿದ್ದಾರೆ.
ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಅವರು, “ವಾರ್ಡನ್ ಶ್ವೇತಾ ನಮಗೆ ನಿರಂತರವಾಗಿ ಬುದ್ಧಿವಾದ ಹೇಳುತ್ತಿದ್ದರು, ಕೆಲವೊಮ್ಮೆ ಹೊಡೆದು, ರೂಮಿನಲ್ಲಿ ಕೂಡಿ ಹಾಕಿ ಬೆದರಿಸುತ್ತಿದ್ದರು. ನಾವು ಹೆಚ್ಚಿನ ಒತ್ತಡ ಅನುಭವಿಸುತ್ತಿದ್ದೆವು. ಹಾಸ್ಟೆಲ್ನಲ್ಲಿ ಇಳಿದುಕೊಳ್ಳಲು ಇಚ್ಛೆಯಾಗದೆ ಸಂಬಂಧಿಕರ ಮನೆಗೆ ಹೋಗಲು ನಿರ್ಧರಿಸಿದ್ದೆವು,” ಎಂದು ಹೇಳಿದ್ದಾರೆ.
ಪತ್ತೆಯಾಗಿದ್ಮೇಲೆ ಬಾಲಕಿಯರು ತಮ್ಮ ಪೋಷಕರು ಅಥವಾ ಸಂಬಂಧಿಕರ ಬಳಿ ಕಳುಹಿಸಬೇಕೆಂದು ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.
ಮದರ್ ತೆರೇಸಾ ಚಾರಿಟೇಬಲ್ ಟ್ರಸ್ಟ್ ನಡೆಸುವ ಈ ವಸತಿ ನಿಲಯದಲ್ಲಿ ಅನಾಥರು ಮತ್ತು ಏಕಪೋಷಕ ಮಕ್ಕಳಿಗೆ ಆಶ್ರಯ ನೀಡಲಾಗುತ್ತದೆ. ಬಾಲಕಿಯರು ನಾಪತ್ತೆಯಾಗುತ್ತಿದ್ದಂತೆ, ವಸತಿ ನಿಲಯದ ಆಡಳಿತದವರು ತಕ್ಷಣವೇ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ಶೋಧ ಕಾರ್ಯ ಕೈಗೊಂಡು, ಬಾಲಕಿಯರನ್ನು ಪತ್ತೆ ಹಚ್ಚಿದ್ದಾರೆ.
ಈ ಘಟನೆಯಿಂದಾಗಿ ಬಾಲಮಂದಿರದ ನಿರ್ವಹಣಾ ರೀತಿಯ ಬಗ್ಗೆ ಗಂಭೀರ ಪ್ರಶ್ನೆಗಳು ಮೂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ಕ್ರಮಕ್ಕಾಗಿ ವಿಚಾರಣೆ ಆರಂಭಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…