Latest

ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಪತ್ತೆ: ವಾರ್ಡನ್ ಕಿರುಕುಳಕ್ಕೆ ತೀವ್ರ ಆರೋಪ”

ಚಿಕ್ಕಬಳ್ಳಾಪುರ, ಮೇ 30: ತಿಪ್ಪೇನಹಳ್ಳಿಯ ಸಮೀಪದಲ್ಲಿರುವ ಮಕ್ಕಳ ಆಸರೆ ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಇದೀಗ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ವಾರ್ಡನ್ ಕಿರುಕುಳದಿಂದ ತೊಂದರೆಗೆ ಒಳಗಾದ ಕಾರಣವಾಗಿ ಅವರು ವಸತಿ ನಿಲಯದಿಂದ ಹೊರಡಿದ್ದಾಗಿ ಬಾಲಕಿಯರು ತಿಳಿಸಿದ್ದಾರೆ.

ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಅವರು, “ವಾರ್ಡನ್ ಶ್ವೇತಾ ನಮಗೆ ನಿರಂತರವಾಗಿ ಬುದ್ಧಿವಾದ ಹೇಳುತ್ತಿದ್ದರು, ಕೆಲವೊಮ್ಮೆ ಹೊಡೆದು, ರೂಮಿನಲ್ಲಿ ಕೂಡಿ ಹಾಕಿ ಬೆದರಿಸುತ್ತಿದ್ದರು. ನಾವು ಹೆಚ್ಚಿನ ಒತ್ತಡ ಅನುಭವಿಸುತ್ತಿದ್ದೆವು. ಹಾಸ್ಟೆಲ್‌ನಲ್ಲಿ ಇಳಿದುಕೊಳ್ಳಲು ಇಚ್ಛೆಯಾಗದೆ ಸಂಬಂಧಿಕರ ಮನೆಗೆ ಹೋಗಲು ನಿರ್ಧರಿಸಿದ್ದೆವು,” ಎಂದು ಹೇಳಿದ್ದಾರೆ.

ಪತ್ತೆಯಾಗಿದ್ಮೇಲೆ ಬಾಲಕಿಯರು ತಮ್ಮ ಪೋಷಕರು ಅಥವಾ ಸಂಬಂಧಿಕರ ಬಳಿ ಕಳುಹಿಸಬೇಕೆಂದು ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.

ಮದರ್ ತೆರೇಸಾ ಚಾರಿಟೇಬಲ್ ಟ್ರಸ್ಟ್ ನಡೆಸುವ ಈ ವಸತಿ ನಿಲಯದಲ್ಲಿ ಅನಾಥರು ಮತ್ತು ಏಕಪೋಷಕ ಮಕ್ಕಳಿಗೆ ಆಶ್ರಯ ನೀಡಲಾಗುತ್ತದೆ. ಬಾಲಕಿಯರು ನಾಪತ್ತೆಯಾಗುತ್ತಿದ್ದಂತೆ, ವಸತಿ ನಿಲಯದ ಆಡಳಿತದವರು ತಕ್ಷಣವೇ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ಶೋಧ ಕಾರ್ಯ ಕೈಗೊಂಡು, ಬಾಲಕಿಯರನ್ನು ಪತ್ತೆ ಹಚ್ಚಿದ್ದಾರೆ.

ಈ ಘಟನೆಯಿಂದಾಗಿ ಬಾಲಮಂದಿರದ ನಿರ್ವಹಣಾ ರೀತಿಯ ಬಗ್ಗೆ ಗಂಭೀರ ಪ್ರಶ್ನೆಗಳು ಮೂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ಕ್ರಮಕ್ಕಾಗಿ ವಿಚಾರಣೆ ಆರಂಭಿಸಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago