ಬಾಗಲಕೋಟೆ: ತಾಲೂಕಿನ ಆಹಾರ ಇಲಾಖೆಯ ನಿರೀಕ್ಷಕ ಹಾಗೂ ಇನ್ನೋರ್ವ ವ್ಯಕ್ತಿ ಸೇರಿದಂತೆ ಮಂಗಳವಾರ ರಾತ್ರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಫುಡ್ ಆಫೀಸರ್ ವೀರಯ್ಯ ಕೋಟಿ ಹಾಗೂ ಮಲ್ಲಿಕಾರ್ಜುನ ಹಾವರಗಿ ಎಂಬ ಅಧಿಕಾರಿಗಳು 60 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಸಿಕ್ಕಿದ್ದಾರೆ. ವಿದ್ಯಾಗಿರಿಯ 8 ನೇ ಕ್ರಾಸ್ ನಲ್ಲಿರುವ ನ್ಯಾಯ ಬೆಲೆ ಅಂಗಡಿಯ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ರದ್ದಾದ ರೇಶನ್ ಅಂಗಡಿಯನ್ನು ಮತ್ತೆ ಪ್ರಾರಂಭಿಸಲು ಅನುಮತಿಗಾಗಿ ಸುರೇಶ ಅಂಗಡಿಯವರಿಂದ 60 ಸಾವಿರ ರೂಪಾಯಿ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಸಿಪಿಐ ಬಿದರಿಯವರ ನೇತೃತ್ವದಲ್ಲಿ ದಾಳಿ ನಡೆಸಿ ಅಧಿಕಾರಿಗಳನ್ನು ಬಂಧಿಸಿದ್ದಾರೆ.
ವರದಿ: ವಿಶ್ವನಾಥ ಭಜಂತ್ರಿ
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…