ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕವಿತಾಳ ಸಮೀಪದ ಕೆ. ತಿಮ್ಮಾಪುರ ಗ್ರಾಮದಲ್ಲಿ ವಿಷಾಹಾರ ಸೇವನೆಯ ಶಂಕೆಯಿಂದ ಹಾಗೂ ಇಬ್ಬರು ಮಕ್ಕಳು ಮೃತಪಟ್ಟು, ಮೂವರು ಗಂಭೀರವಾಗಿ ಅಸ್ವಸ್ಥರಾದ ಹೃದಯವಿದ್ರಾವಕ ಘಟನೆ ಜುಲೈ 21ರಂದು ತಡರಾತ್ರಿ ನಡೆದಿದೆ.
ಮೃತರನ್ನು ರಮೇಶ್ (36), ಅವರ ಮಗಳು ನಾಗಮ್ಮ (8) ಮತ್ತು ದೀಪಾ (6) ಎಂದು ಗುರುತಿಸಲಾಗಿದೆ. ಈ ದುರಂತದಲ್ಲಿ ತಾಯಿ ಪದ್ಮಾ, ಮಗ ಕೃಷ್ಣ ಹಾಗೂ ಮಗಳು ಚೈತ್ರಾ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣವೇ ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂಲ ವರದಿಗಳ ಪ್ರಕಾರ, ಸೋಮವಾರ ರಾತ್ರಿ ಕುಟುಂಬದ ಸದಸ್ಯರು ಊಟ ಮುಗಿಸಿ ಮಲಗಿದ್ದ ನಂತರ ಮಧ್ಯರಾತ್ರಿಯಿಂದಲೇ ಹೊಟ್ಟೆನೋವು, ವಾಂತಿ, ಭಾರೀ ಅಸ್ವಸ್ಥತೆ ಅನುಭವಿಸುತ್ತಿದ್ದರು. ಬೆಳಗ್ಗೆ 3 ಗಂಟೆ ಸುಮಾರಿಗೆ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೂವರು ಮೃತಪಟ್ಟಿದ್ದಾರೆ.
ವಿಷಾಹಾರ ಸೇವನೆಯ ಕಾರಣವಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಪೂರ್ಣ ವೈದ್ಯಕೀಯ ವರದಿ ಇನ್ನೂ ಲಭ್ಯವಾಗಿಲ್ಲ. ಘಟನೆ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…