Latest

ಪ್ರಪಥಮ ಬಾರಿಗೆ ಮೀಸಲು ಕ್ಷೇತ್ರದ ಹ.ಬೋ.ಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮಹಿಳಾ ಆಕಾಂಕ್ಷಿಯಾಗಿ ದೀನಾ ಮಂಜುನಾಥ್ ಎಂಟ್ರಿ.

ಕೊಟ್ಟೂರು:- ಭಾರತೀಯ ಜನತಾ ಪಕ್ಷದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀನಾ ಮಂಜುನಾಥ ರವರು ಹಗರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆಂದು ಹೇಳಿದರು.ಭಾರತೀಯ ಜನತಾ ಪಕ್ಷದ ಪ್ರಧಾನಿ ನೇತೃತ್ವದಲ್ಲಿ ದೇಶದಲ್ಲಿ ಹಲವಾರು ಜನಪರ ಯೋಜನೆಗಳು ಜಾರಿಗೆ ತಂದಿದ್ದು ಅವುಗಳ ಅನುಷ್ಠಾನ ಪ್ರಗತಿಪರ ಸಾಧನೆಗಳಿಂದ ದೇಶದ ಅಭಿವೃದ್ಧಿಯಾಗಿದ್ದು, ಈ ಬಾರಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಕ್ಕರೆ ಈ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ನನ್ನ ಮೊದಲ ಆದ್ಯತೆ ಎಂದು ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರ ಜೊತೆಗೂಡಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಹಿಂದೆ ನನ್ನ ಅಧಿಕಾರಾವಧಿಯಲ್ಲಿ ಜಿಲ್ಲೆಯ ಹಲವಾರು ಅಭಿವೃದ್ಧಿ ಕೆಲಸವನ್ನು ಮಾಡಿ ಜನರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದೇನೆ.ವಿಶೇಷವಾಗಿ ಉದ್ಯೋಗಗಳಾಗಳಿ,ಕುಡಿಯುವ ನೀರಿನ ವ್ಯವಸ್ಥೆ,ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಲಿ ಇನ್ನೂ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿ ಯಶಸ್ವಿಯಾಗಿದ್ದೇನೆ ಹಾಗೂ ರಾಜಕೀಯವಾಗಿ ನಿರಂತರ ಕ್ಷೇತ್ರದ ಜನತೆ ಸಂಪರ್ಕದಲ್ಲಿದ್ದು ಎಲ್ಲಾ ಸಮುದಾಯದ ಜನರ ಪ್ರೀತಿ ವಿಶ್ವಾಸವನ್ನು ತೆಗೆದುಕೊಂಡಿದ್ದೇನೆ ಆದ್ದರಿಂದಾಗಿ ಎಸ್ಸಿ ಮೀಸಲು ಕ್ಷೇತ್ರವಿರುವ ಹಗರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಡ ಹಾಗೂ ಮೀಸಲು ಕ್ಷೇತ್ರ ಆಗಿ 15 ವರ್ಷ ಕಳೆದರೂ ನಿಜವಾದ ಅಸ್ಪೃಶ್ಯ ಸಮುದಾಯವು ಇಲ್ಲಿ ರಾಜಕೀಯವಾಗಿ ಬೆಳೆಯದೆ ಇರುವುದು ನನಗೆ ನೋವಿದೆ.ಈ ಕಾರಣದಿಂದ ಭಾರತೀಯ ಜನತಾ ಪಕ್ಷದ ರಾಜ್ಯ ಹಿರಿಯ ಮುಖಂಡರ ಗಮನವನ್ನು ಸೆಳೆದಿದ್ದೇನೆ.ಹೈಕಮಾಂಡ್ ಟಿಕೆಟ್ ನೀಡಿದ್ದೆ ಆದರೆ ಕ್ಷೇತ್ರ ಓಡಾಟ ನಡೆಸಿ ಈ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ತಂದು ಕೊಡಲು ಶ್ರಮ ವಹಿಸಿ ಕೆಲಸ ಮಾಡುತ್ತೇನೆ ಹಾಗೂ ಮಹಿಳೆಯರು ಕೂಡ ವ್ಯವಸ್ಥೆಯನ್ನು ಬದಲಾಯಿಸ ಬಲ್ಲರು ಅಂದುಕೊಳ್ಳುವಂತೆ ಖಂಡಿತ ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸಲು ಸತತವಾಗಿ ಪರಯತ್ನಿಸುತ್ತೇನೆಂದು ಹೇಳಿದರು.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago