Latest

ಪ್ರಪಥಮ ಬಾರಿಗೆ ಮೀಸಲು ಕ್ಷೇತ್ರದ ಹ.ಬೋ.ಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮಹಿಳಾ ಆಕಾಂಕ್ಷಿಯಾಗಿ ದೀನಾ ಮಂಜುನಾಥ್ ಎಂಟ್ರಿ.

ಕೊಟ್ಟೂರು:- ಭಾರತೀಯ ಜನತಾ ಪಕ್ಷದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀನಾ ಮಂಜುನಾಥ ರವರು ಹಗರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆಂದು ಹೇಳಿದರು.ಭಾರತೀಯ ಜನತಾ ಪಕ್ಷದ ಪ್ರಧಾನಿ ನೇತೃತ್ವದಲ್ಲಿ ದೇಶದಲ್ಲಿ ಹಲವಾರು ಜನಪರ ಯೋಜನೆಗಳು ಜಾರಿಗೆ ತಂದಿದ್ದು ಅವುಗಳ ಅನುಷ್ಠಾನ ಪ್ರಗತಿಪರ ಸಾಧನೆಗಳಿಂದ ದೇಶದ ಅಭಿವೃದ್ಧಿಯಾಗಿದ್ದು, ಈ ಬಾರಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಕ್ಕರೆ ಈ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ನನ್ನ ಮೊದಲ ಆದ್ಯತೆ ಎಂದು ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರ ಜೊತೆಗೂಡಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಹಿಂದೆ ನನ್ನ ಅಧಿಕಾರಾವಧಿಯಲ್ಲಿ ಜಿಲ್ಲೆಯ ಹಲವಾರು ಅಭಿವೃದ್ಧಿ ಕೆಲಸವನ್ನು ಮಾಡಿ ಜನರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದೇನೆ.ವಿಶೇಷವಾಗಿ ಉದ್ಯೋಗಗಳಾಗಳಿ,ಕುಡಿಯುವ ನೀರಿನ ವ್ಯವಸ್ಥೆ,ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಲಿ ಇನ್ನೂ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿ ಯಶಸ್ವಿಯಾಗಿದ್ದೇನೆ ಹಾಗೂ ರಾಜಕೀಯವಾಗಿ ನಿರಂತರ ಕ್ಷೇತ್ರದ ಜನತೆ ಸಂಪರ್ಕದಲ್ಲಿದ್ದು ಎಲ್ಲಾ ಸಮುದಾಯದ ಜನರ ಪ್ರೀತಿ ವಿಶ್ವಾಸವನ್ನು ತೆಗೆದುಕೊಂಡಿದ್ದೇನೆ ಆದ್ದರಿಂದಾಗಿ ಎಸ್ಸಿ ಮೀಸಲು ಕ್ಷೇತ್ರವಿರುವ ಹಗರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಡ ಹಾಗೂ ಮೀಸಲು ಕ್ಷೇತ್ರ ಆಗಿ 15 ವರ್ಷ ಕಳೆದರೂ ನಿಜವಾದ ಅಸ್ಪೃಶ್ಯ ಸಮುದಾಯವು ಇಲ್ಲಿ ರಾಜಕೀಯವಾಗಿ ಬೆಳೆಯದೆ ಇರುವುದು ನನಗೆ ನೋವಿದೆ.ಈ ಕಾರಣದಿಂದ ಭಾರತೀಯ ಜನತಾ ಪಕ್ಷದ ರಾಜ್ಯ ಹಿರಿಯ ಮುಖಂಡರ ಗಮನವನ್ನು ಸೆಳೆದಿದ್ದೇನೆ.ಹೈಕಮಾಂಡ್ ಟಿಕೆಟ್ ನೀಡಿದ್ದೆ ಆದರೆ ಕ್ಷೇತ್ರ ಓಡಾಟ ನಡೆಸಿ ಈ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ತಂದು ಕೊಡಲು ಶ್ರಮ ವಹಿಸಿ ಕೆಲಸ ಮಾಡುತ್ತೇನೆ ಹಾಗೂ ಮಹಿಳೆಯರು ಕೂಡ ವ್ಯವಸ್ಥೆಯನ್ನು ಬದಲಾಯಿಸ ಬಲ್ಲರು ಅಂದುಕೊಳ್ಳುವಂತೆ ಖಂಡಿತ ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸಲು ಸತತವಾಗಿ ಪರಯತ್ನಿಸುತ್ತೇನೆಂದು ಹೇಳಿದರು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

20 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

20 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

20 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

20 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

20 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

20 hours ago