Latest

ಪ್ರಪಥಮ ಬಾರಿಗೆ ಮೀಸಲು ಕ್ಷೇತ್ರದ ಹ.ಬೋ.ಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮಹಿಳಾ ಆಕಾಂಕ್ಷಿಯಾಗಿ ದೀನಾ ಮಂಜುನಾಥ್ ಎಂಟ್ರಿ.

ಕೊಟ್ಟೂರು:- ಭಾರತೀಯ ಜನತಾ ಪಕ್ಷದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀನಾ ಮಂಜುನಾಥ ರವರು ಹಗರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆಂದು ಹೇಳಿದರು.ಭಾರತೀಯ ಜನತಾ ಪಕ್ಷದ ಪ್ರಧಾನಿ ನೇತೃತ್ವದಲ್ಲಿ ದೇಶದಲ್ಲಿ ಹಲವಾರು ಜನಪರ ಯೋಜನೆಗಳು ಜಾರಿಗೆ ತಂದಿದ್ದು ಅವುಗಳ ಅನುಷ್ಠಾನ ಪ್ರಗತಿಪರ ಸಾಧನೆಗಳಿಂದ ದೇಶದ ಅಭಿವೃದ್ಧಿಯಾಗಿದ್ದು, ಈ ಬಾರಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಕ್ಕರೆ ಈ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ನನ್ನ ಮೊದಲ ಆದ್ಯತೆ ಎಂದು ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರ ಜೊತೆಗೂಡಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಹಿಂದೆ ನನ್ನ ಅಧಿಕಾರಾವಧಿಯಲ್ಲಿ ಜಿಲ್ಲೆಯ ಹಲವಾರು ಅಭಿವೃದ್ಧಿ ಕೆಲಸವನ್ನು ಮಾಡಿ ಜನರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದೇನೆ.ವಿಶೇಷವಾಗಿ ಉದ್ಯೋಗಗಳಾಗಳಿ,ಕುಡಿಯುವ ನೀರಿನ ವ್ಯವಸ್ಥೆ,ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಲಿ ಇನ್ನೂ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿ ಯಶಸ್ವಿಯಾಗಿದ್ದೇನೆ ಹಾಗೂ ರಾಜಕೀಯವಾಗಿ ನಿರಂತರ ಕ್ಷೇತ್ರದ ಜನತೆ ಸಂಪರ್ಕದಲ್ಲಿದ್ದು ಎಲ್ಲಾ ಸಮುದಾಯದ ಜನರ ಪ್ರೀತಿ ವಿಶ್ವಾಸವನ್ನು ತೆಗೆದುಕೊಂಡಿದ್ದೇನೆ ಆದ್ದರಿಂದಾಗಿ ಎಸ್ಸಿ ಮೀಸಲು ಕ್ಷೇತ್ರವಿರುವ ಹಗರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಡ ಹಾಗೂ ಮೀಸಲು ಕ್ಷೇತ್ರ ಆಗಿ 15 ವರ್ಷ ಕಳೆದರೂ ನಿಜವಾದ ಅಸ್ಪೃಶ್ಯ ಸಮುದಾಯವು ಇಲ್ಲಿ ರಾಜಕೀಯವಾಗಿ ಬೆಳೆಯದೆ ಇರುವುದು ನನಗೆ ನೋವಿದೆ.ಈ ಕಾರಣದಿಂದ ಭಾರತೀಯ ಜನತಾ ಪಕ್ಷದ ರಾಜ್ಯ ಹಿರಿಯ ಮುಖಂಡರ ಗಮನವನ್ನು ಸೆಳೆದಿದ್ದೇನೆ.ಹೈಕಮಾಂಡ್ ಟಿಕೆಟ್ ನೀಡಿದ್ದೆ ಆದರೆ ಕ್ಷೇತ್ರ ಓಡಾಟ ನಡೆಸಿ ಈ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ತಂದು ಕೊಡಲು ಶ್ರಮ ವಹಿಸಿ ಕೆಲಸ ಮಾಡುತ್ತೇನೆ ಹಾಗೂ ಮಹಿಳೆಯರು ಕೂಡ ವ್ಯವಸ್ಥೆಯನ್ನು ಬದಲಾಯಿಸ ಬಲ್ಲರು ಅಂದುಕೊಳ್ಳುವಂತೆ ಖಂಡಿತ ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸಲು ಸತತವಾಗಿ ಪರಯತ್ನಿಸುತ್ತೇನೆಂದು ಹೇಳಿದರು.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

4 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

4 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

23 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago