Latest

ಕಾಲೇಜು ಮೈದಾನದಲ್ಲಿ ವಿದ್ಯಾರ್ಥಿನಿಗೆ ಬಲವಂತವಾಗಿ ಕಿಸ್

ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಲವಂತವಾಗಿ ಕಿಸ್ ಮಾಡಿ ರ‍್ಯಾಗಿಂಗ್ ಮಾಡಿದ ಘಟನೆ ಒಡಿಶಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆದ ನಂತರ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡೊದ್ದಾರೆ. ಗುಂಜನ್ ಜಿಲ್ಲೆಯ ಕಾಲೇಜಿನಲ್ಲಿ ಈ ಘಟನೆ ಸಂಬಂಧಿಸಿದಂತೆ 12 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಕಳೆದ ತಿಂಗಳು ಸರ್ಕಾರಿ ಕಾಲೇಜಿಗೆ ಸೇರಿದ್ದ ಪ್ರಥಮ ವರ್ಷದ ವಿದ್ಯಾರ್ಥಿನಿಗೆ ಅಪ್ರಾಪ್ತ ಬಾಲಕನೋರ್ವ ಹಿರಿಯ ವಿದ್ಯಾರ್ಥಿಗಳ ಪ್ರಚೋದನೆಯ ಮೇರೆಗೆ ಮೈದಾನದಲ್ಲಿ ಬಲವಂತವಾಗಿ ಮುತ್ತಿಟ್ಟಿದ್ದಾನೆ. ಅವಳು ಹೊರಡಲು ಎದ್ದು ನಿಂತಾಗ, ಸೀನಿಯರ್ ವಿದ್ಯಾರ್ಥಿಯೊಬ್ಬ ಅವಳ ಕೈ ಹಿಡಿದು ತಡೆದಿದ್ದಾನೆ. ಆತ ಕೈಯಲ್ಲಿ ದೊಣ್ಣೆ ಹಿಡಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಆಶ್ಚರ್ಯವೆಂಬಂತೆ ಈ ಘಟನೆಯು ಕಾಲೇಜಿನ ಇತರ ಹುಡುಗಿಯರ ಸಮ್ಮುಖದಲ್ಲೇ ನಡೆದಿದೆ. ಆದರೆ ದೈಹಿಕ ಕಿರುಕುಳದ ವಿರುದ್ಧ ಪ್ರತಿಭಟಿಸುವ ಬದಲು ಅವರು ಪ್ರೋತ್ಸಾಹ ನೀಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.
ಘಟನೆಯಲ್ಲಿ ಭಾಗಿಯಾದವರನ್ನು ನಾವು ಗುರುತಿಸಿದ್ದೇವೆ. ಅಲ್ಲದೆ ಅವರನ್ನು ಕಾಲೇಜಿನಿಂದ ಹೊರ ಹಾಕಿದ್ದೇವೆ. ಮುಂದೆ ಅವರಿಗೆ ಪರೀಕ್ಷೆ ಬರೆಯಲೂ ಅವಕಾಶ ನೀಡುವುದಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಹೇಳಿದ್ದಾರೆ. ಇದು ಕೇವಲ ರ‍್ಯಾಗಿಂಗ್ ಪ್ರಕರಣವಲ್ಲ, ಆದರೆ ದೈಹಿಕ ಕಿರುಕುಳಕ್ಕೆ ಸಮಾನವಾಗಿದೆ ಎಂದು ಬರ್ಹಾಂಪುರದ ಪೊಲೀಸ್ ಅಧೀಕ್ಷಕ ಸರಬನ್ ವಿವೇಕ್ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago