Latest

ಕಾಲೇಜು ಮೈದಾನದಲ್ಲಿ ವಿದ್ಯಾರ್ಥಿನಿಗೆ ಬಲವಂತವಾಗಿ ಕಿಸ್

ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಲವಂತವಾಗಿ ಕಿಸ್ ಮಾಡಿ ರ‍್ಯಾಗಿಂಗ್ ಮಾಡಿದ ಘಟನೆ ಒಡಿಶಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆದ ನಂತರ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡೊದ್ದಾರೆ. ಗುಂಜನ್ ಜಿಲ್ಲೆಯ ಕಾಲೇಜಿನಲ್ಲಿ ಈ ಘಟನೆ ಸಂಬಂಧಿಸಿದಂತೆ 12 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಕಳೆದ ತಿಂಗಳು ಸರ್ಕಾರಿ ಕಾಲೇಜಿಗೆ ಸೇರಿದ್ದ ಪ್ರಥಮ ವರ್ಷದ ವಿದ್ಯಾರ್ಥಿನಿಗೆ ಅಪ್ರಾಪ್ತ ಬಾಲಕನೋರ್ವ ಹಿರಿಯ ವಿದ್ಯಾರ್ಥಿಗಳ ಪ್ರಚೋದನೆಯ ಮೇರೆಗೆ ಮೈದಾನದಲ್ಲಿ ಬಲವಂತವಾಗಿ ಮುತ್ತಿಟ್ಟಿದ್ದಾನೆ. ಅವಳು ಹೊರಡಲು ಎದ್ದು ನಿಂತಾಗ, ಸೀನಿಯರ್ ವಿದ್ಯಾರ್ಥಿಯೊಬ್ಬ ಅವಳ ಕೈ ಹಿಡಿದು ತಡೆದಿದ್ದಾನೆ. ಆತ ಕೈಯಲ್ಲಿ ದೊಣ್ಣೆ ಹಿಡಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಆಶ್ಚರ್ಯವೆಂಬಂತೆ ಈ ಘಟನೆಯು ಕಾಲೇಜಿನ ಇತರ ಹುಡುಗಿಯರ ಸಮ್ಮುಖದಲ್ಲೇ ನಡೆದಿದೆ. ಆದರೆ ದೈಹಿಕ ಕಿರುಕುಳದ ವಿರುದ್ಧ ಪ್ರತಿಭಟಿಸುವ ಬದಲು ಅವರು ಪ್ರೋತ್ಸಾಹ ನೀಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.
ಘಟನೆಯಲ್ಲಿ ಭಾಗಿಯಾದವರನ್ನು ನಾವು ಗುರುತಿಸಿದ್ದೇವೆ. ಅಲ್ಲದೆ ಅವರನ್ನು ಕಾಲೇಜಿನಿಂದ ಹೊರ ಹಾಕಿದ್ದೇವೆ. ಮುಂದೆ ಅವರಿಗೆ ಪರೀಕ್ಷೆ ಬರೆಯಲೂ ಅವಕಾಶ ನೀಡುವುದಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಹೇಳಿದ್ದಾರೆ. ಇದು ಕೇವಲ ರ‍್ಯಾಗಿಂಗ್ ಪ್ರಕರಣವಲ್ಲ, ಆದರೆ ದೈಹಿಕ ಕಿರುಕುಳಕ್ಕೆ ಸಮಾನವಾಗಿದೆ ಎಂದು ಬರ್ಹಾಂಪುರದ ಪೊಲೀಸ್ ಅಧೀಕ್ಷಕ ಸರಬನ್ ವಿವೇಕ್ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

10 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

20 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

20 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

1 day ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

1 day ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

1 day ago