Crime

ಸಾಲ ತೀರಿಸಲು ಅಪ್ರಾಪ್ತ ಬಾಲಕಿಯ ಬಲವಂತ ವಿವಾಹ: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಬೆಳಗಾವಿ ಜಿಲ್ಲೆಯ ಸವದತ್ತಿಯ ಗ್ರಾಮದಲ್ಲಿ 50,000 ರೂ. ಸಾಲವನ್ನು ವಾಪಸ್ ನೀಡದ ಕಾರಣ, ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ವಿವಾಹಮಾಡಿದ ಘಟನೆ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣವಾಗಿ ದಾಖಲಾಗಿದೆ.
ಸಂತ್ರಸ್ತ ಬಾಲಕಿ ತನ್ನ ದೂರುನಲ್ಲಿ, ಆಕೆಯ ವಿರುದ್ಧ ಆಘಾತಕಾರಿ ಘಟನೆ ಮಾಡಿದ ಆರೋಪಿ ವಿಶಾಲ್ ಡವಳಿ, ಅವನ ತಾಯಿ ರೇಖಾ ಡವಳಿ, ತಂದೆ ಪುಂಡಳಿಕ ಡವಳಿ ಹಾಗೂ ಸಹೋದರ ಶ್ಯಾಮ ಡವಳಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಲಾಗಿದೆ.
ಬಾಲಕಿಯ ಕುಟುಂಬ ಬಡವನಾಗಿದ್ದು, ಆಕೆಯ ಚಿಕ್ಕಪ್ಪ ಮತ್ತು ತಾಯಿ ಅನಗೋಳದಲ್ಲಿ ವಾಚ್‌ಮನ್‌ ಕೆಲಸ ಮಾಡುತ್ತಿದ್ದರು. ಕೆಲವು ಸಮಯದ ಹಿಂದೆ, ಆಕೆಗೆ ಅನಾರೋಗ್ಯ ಕಂಡುಬಂದಿದ್ದು, ಕುಟುಂಬ ಆಕೆಯ ಅತ್ತಿಗೆ ಹೊತ್ತಹಾಗಿದ್ದ ಚಿಕಿತ್ಸೆಗೆ ಹಣದ ಕೊರತೆಯಾದುದರಿಂದ, ಅವರು 50,000 ರೂ. ಸಾಲವನ್ನು ಪಡೆದಿದ್ದರು. ಆದರೆ, ಸಾಲವನ್ನು ಸಮಯಕ್ಕೆ ತಲುಪಿಸಲು ವಿಳಂಬವಾದ ಕಾರಣ, ವಿಶಾಲ್ ಡವಳಿ ಕುಟುಂಬಸ್ಥರು ಬಾಲಕಿಯನ್ನು ವಿವಾಹ ಮಾಡಲು ಪಟ್ಟು ಹಿಡಿದು, 2024ರ ಸೆಪ್ಟೆಂಬರ್ 18 ರಂದು ಅವಳನ್ನು ಬಲವಂತವಾಗಿ ವಿವಾಹಮಾಡಿದ್ರು.
ಮದುವೆಯ ನಂತರ, ಆಕೆಗೆ ನಿರಂತರ ಲೈಂಗಿಕ ಕಿರುಕುಳ ನೀಡಲಾಗಿದ್ದು, ಬಲವಂತ ದೈಹಿಕ ಸಂಪರ್ಕವೂ ನಡೆದಿದ್ದು, ಬಾಲಕಿಯು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರ ಪರಿಶೀಲನೆ ಮುಂದುವರಿಯುತ್ತಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago