ಮಂಗಳೂರು, ಜುಲೈ 11: ಅಕ್ರಮ ವಿದೇಶಿ ಕರೆನ್ಸಿ ಹೊಂದಿದ್ದ ಆರೋಪದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವ ಘಟನೆ ನಡೆದಿದೆ.
ತೌಸಿಫ್ ಅಹಮ್ಮದ್ ಮತ್ತು ಮೋತಿಯಾ ಖೈರುನ್ನಿಸಾ ಎಂಬವರು ಜುಲೈ 11ರಂದು ರಾತ್ರಿ 9.25ಕ್ಕೆ ಇಂಡಿಗೋ ವಿಮಾನದ ಮೂಲಕ ಅಬುಧಾಬಿಗೆ ತೆರಳಲು ಪ್ರಯತ್ನಿಸುತ್ತಿದ್ದರು. ವಿಮಾನ ಹತ್ತುವ ಮೊದಲು ಕಸ್ಟಮ್ಸ್ ಅಧಿಕಾರಿಗಳು ಅವರನ್ನು ತಪಾಸಣೆಗೊಳಪಡಿಸಿದರು.
ಈ ವೇಳೆ ಅವರ ಬಳಿ ಸುಮಾರು 40,000 ಸೌದಿ ಅರೇಬಿಯನ್ ರಿಯಲ್ ಕರೆನ್ಸಿಯನ್ನು ಪತ್ತೆಹಚ್ಚಲಾಗಿದೆ. ಭಾರತೀಯ ಮೌಲ್ಯದಲ್ಲಿ ಇದು ಸುಮಾರು 9.74 ಲಕ್ಷ ರೂಪಾಯಿ ಆಗುತ್ತದೆ. ಕ್ರಮಬದ್ಧ ದಾಖಲೆ ಇಲ್ಲದೇ ಈ ಹಣವನ್ನು ಇಟ್ಟುಕೊಂಡಿರುವ ಬಗ್ಗೆ ಮಾಹಿತಿ ದೊರೆತಿದ್ದು, ಕಾನೂನು ಉಲ್ಲಂಘನೆಯ ಮೇರೆಗೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಈ ಕುರಿತು ಕಸ್ಟಮ್ಸ್ ಇಲಾಖೆ ತನಿಖೆ ಆರಂಭಿಸಿದ್ದು, ಹಣದ ಮೂಲ ಮತ್ತು ಉದ್ದೇಶ ತಿಳಿಯಲು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…