Latest

ಅರಣ್ಯಾಧಿಕಾರಿ ಕೆ.ಎನ್. ರವಿಕೀರ್ತಿ ಅಮಾನತು: ಕರ್ತವ್ಯ ಲೋಪದ ಆರೋಪ,

ಕರ್ತವ್ಯ ಲೋಪದಡಿ ಶ್ರೀನಿವಾಸಪುರ ವಲಯ ಅರಣ್ಯಾಧಿಕಾರಿ ಕೆ.ಎನ್‌.ರವಿಕೀರ್ತಿ ಅವರನ್ನು ಅಮಾನತುಪಡಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ) ಮೀನಾಕ್ಷಿ ನೇಗಿ ಆದೇಶಿಸಿದ್ದಾರೆ.

ವಲಯ ವ್ಯಾಪ್ತಿಯಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ರವಿಕೀರ್ತಿ ಇಲಾಖೆಯ ಮೇಲಧಿಕಾರಿಗಳಿಗೆ ಮಾಹಿತಿ ನೀಡದೆ, ನ್ಯಾಯಾಲಯದಲ್ಲಿಯೂ ಯಾವುದೇ ಕ್ರಮವಹಿಸದೆ ಕರ್ತವ್ಯ ಲೋಪ ಎಸಗಿ ಒತ್ತುವರಿದಾರರಿಗೆ ಸಹಾಯ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಬೆಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಯು (ಸಿಎಫ್‌) ಮೀನಾ ನೇಗಿ ಅವರಿಗೆ ವರದಿ ನೀಡಿದ್ದರು.

ಕೋಲಾರ ಪ್ರಾದೇಶಿಕ ವಿಭಾಗದ ಶ್ರೀನಿವಾಸಪುರ ವಲಯದ ವ್ಯಾಪ್ತಿಯಲ್ಲಿ 4,060 ಎಕರೆ ಅರಣ್ಯ ಪ್ರದೇಶವನ್ನು 1910 ಜುಲೈ 26ರ ಪ್ರಕಾರ ರಾಜ್ಯ ಅರಣ್ಯ ಪ್ರದೇಶವೆಂದು ಘೋಷಿಸಲಾಗಿದೆ. ಕರ್ನಾಟಕ ಅರಣ್ಯ ಪ್ರದೇಶ ಕಾಯ್ದೆ 1963ರ ಸೆಕ್ಷನ್‌ 23ರ ಪ್ರಕಾರ ಅರಣ್ಯ ಪ್ರದೇಶವು ಮೀಸಲು ಅರಣ್ಯ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಒತ್ತುವರಿಯಾಗಿದ್ದ ಅರಣ್ಯ ಜಮೀನನ್ನು 2023ನೇ ಸಾಲಿನಲ್ಲಿ ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆ ವಿರುದ್ಧ ಅಂದಾಜು 12 ರಿಟ್ ಅರ್ಜಿಗಳು ಹೈಕೋರ್ಟ್‌ನಲ್ಲಿ ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ ಎಂದು ವರದಿಯಲ್ಲಿ ತಿಳಿಸಿದ್ದರು.

ರಿಟ್‌ ಅರ್ಜಿ (20247/2023) ಸಂಬಂಧಿಸಿದಂತೆ ಒತ್ತುವರಿದಾರ ಕೆ.ಎಂ.ನಾಗರಾಜು ಅವರ ಸುಮಾರು 6 ಎಕರೆ ಜಮೀನನ್ನು ‌ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗಿರುತ್ತದೆ. ಆ ಜಾಗದಲ್ಲಿ ಕೆಎಫ್‌ಡಿಎ ಯೋಜನೆಯಡಿ ನೆಡುತೋಪು ಬೆಳೆಸಿದ್ದು, 1ನೇ ವರ್ಷದ ನಿರ್ವಹಣೆಯಲ್ಲಿ ಇರುತ್ತವೆ. ಇದಲ್ಲದೆ; ತೆರವುಗೊಳಿಸಿದ ಪ್ರದೇಶದ ಗಡಿಯನ್ನು ಒತ್ತುವರಿಯನ್ನು ಸಂರಕ್ಷಿಸುವ ಸಲುವಾಗಿ ಜಾನುವಾರು ನಿರೋಧ ಕಂದಕ ನಿರ್ಮಿಸಲಾಗಿದೆ. ಅದಕ್ಕೆ ₹ 3.25 ಕೋಟಿ ಖರ್ಚಾಗಿದೆ ಎಂದಿದ್ದಾರೆ.

ಆದರೆ, ಒತ್ತುವರಿದಾರ ನಾಗರಾಜು ಹಾಗೂ ಇನ್ನಿತರರು ರಿಟ್‌ ಅರ್ಜಿ ಸಂಬಂಧದ ಜಮೀನು ತಮ್ಮ ಪರ ಮಧ್ಯಂತರ ಆದೇಶ ಇದೆ ಎಂದು ಹೇಳಿ ಏಪ್ರಿಲ್‌ 5ರಂದು ಆರೇಳು ಟ್ರ್ಯಾಕ್ಟರ್‌ಗಳನ್ನು ತೆಗೆದುಕೊಂಡು ಅರಣ್ಯ ಪ್ರದೇಶಕ್ಕೆ ಅನಧಿಕೃತವಾಗಿ ಪ್ರವೇಶ ಮಾಡಿ ಸುಮಾರು 100 ಎಕರೆಯಷ್ಟು ನೆಡುತೋಪು ನಿರ್ಮಾಣ ಮಾಡಿರುವುದನ್ನು ಹಾಳು ಮಾಡಿದ್ದಾರೆ. ಈ ವಿಚಾರವನ್ನು ಕೋಲಾರ ಡಿಸಿಎಫ್‌ ದೂರವಾಣಿ ಮೂಲಕ ತಿಳಿಸಿರುವುದಾಗಿ ವರದಿಯಲ್ಲಿ ಸಿಎಫ್‌ ಉಲ್ಲೇಖಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಶ್ರೀನಿವಾಸಪುರ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ; ಅಧಿಕಾರಿ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಸಾಕ್ಷ್ಯಾಧಾರಗಳಿದ್ದು, ಅಧಿಕಾರಿ ವಿರುದ್ಧ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಶಿಸ್ತು ಪ್ರಾಧಿಕಾರಕ್ಕೆ ಮನವರಿಕೆಯಾಗಿದೆ. ಕನಾಟಕ ಅರಣ್ಯ ಸಂಹಿತೆ 1976ರಡಿ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವಿಫಲರಾಗಿರುವುದು ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮಗಳು 2021 ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಆಡಳಿತಾತ್ಮ ಹಿತದೃಷ್ಟಿಯಿಂದ, ಶಿಸ್ತು ಪರಿಪಾಲನೆಗಾಗಿ ಗಂಭೀರವಾಗಿ ಪರಿಗಣಿಸಲಾಗಿದೆ, ಅದ್ದರಿಂದ ಇಲಾಖೆಯ ವಿಚಾರಣೆ ಮತ್ತು ತನಿಖೆಯನ್ನು ಬಾಕಿ ಇರಿಸಿ ಅಮಾನತ್ತಿನಲ್ಲಿಡಲಾಗಿದೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

14 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

15 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

15 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

15 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

15 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago