Latest

ಅರಣ್ಯಾಧಿಕಾರಿ ಕೆ.ಎನ್. ರವಿಕೀರ್ತಿ ಅಮಾನತು: ಕರ್ತವ್ಯ ಲೋಪದ ಆರೋಪ,

ಕರ್ತವ್ಯ ಲೋಪದಡಿ ಶ್ರೀನಿವಾಸಪುರ ವಲಯ ಅರಣ್ಯಾಧಿಕಾರಿ ಕೆ.ಎನ್‌.ರವಿಕೀರ್ತಿ ಅವರನ್ನು ಅಮಾನತುಪಡಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ) ಮೀನಾಕ್ಷಿ ನೇಗಿ ಆದೇಶಿಸಿದ್ದಾರೆ.

ವಲಯ ವ್ಯಾಪ್ತಿಯಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ರವಿಕೀರ್ತಿ ಇಲಾಖೆಯ ಮೇಲಧಿಕಾರಿಗಳಿಗೆ ಮಾಹಿತಿ ನೀಡದೆ, ನ್ಯಾಯಾಲಯದಲ್ಲಿಯೂ ಯಾವುದೇ ಕ್ರಮವಹಿಸದೆ ಕರ್ತವ್ಯ ಲೋಪ ಎಸಗಿ ಒತ್ತುವರಿದಾರರಿಗೆ ಸಹಾಯ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಬೆಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಯು (ಸಿಎಫ್‌) ಮೀನಾ ನೇಗಿ ಅವರಿಗೆ ವರದಿ ನೀಡಿದ್ದರು.

ಕೋಲಾರ ಪ್ರಾದೇಶಿಕ ವಿಭಾಗದ ಶ್ರೀನಿವಾಸಪುರ ವಲಯದ ವ್ಯಾಪ್ತಿಯಲ್ಲಿ 4,060 ಎಕರೆ ಅರಣ್ಯ ಪ್ರದೇಶವನ್ನು 1910 ಜುಲೈ 26ರ ಪ್ರಕಾರ ರಾಜ್ಯ ಅರಣ್ಯ ಪ್ರದೇಶವೆಂದು ಘೋಷಿಸಲಾಗಿದೆ. ಕರ್ನಾಟಕ ಅರಣ್ಯ ಪ್ರದೇಶ ಕಾಯ್ದೆ 1963ರ ಸೆಕ್ಷನ್‌ 23ರ ಪ್ರಕಾರ ಅರಣ್ಯ ಪ್ರದೇಶವು ಮೀಸಲು ಅರಣ್ಯ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಒತ್ತುವರಿಯಾಗಿದ್ದ ಅರಣ್ಯ ಜಮೀನನ್ನು 2023ನೇ ಸಾಲಿನಲ್ಲಿ ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆ ವಿರುದ್ಧ ಅಂದಾಜು 12 ರಿಟ್ ಅರ್ಜಿಗಳು ಹೈಕೋರ್ಟ್‌ನಲ್ಲಿ ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ ಎಂದು ವರದಿಯಲ್ಲಿ ತಿಳಿಸಿದ್ದರು.

ರಿಟ್‌ ಅರ್ಜಿ (20247/2023) ಸಂಬಂಧಿಸಿದಂತೆ ಒತ್ತುವರಿದಾರ ಕೆ.ಎಂ.ನಾಗರಾಜು ಅವರ ಸುಮಾರು 6 ಎಕರೆ ಜಮೀನನ್ನು ‌ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗಿರುತ್ತದೆ. ಆ ಜಾಗದಲ್ಲಿ ಕೆಎಫ್‌ಡಿಎ ಯೋಜನೆಯಡಿ ನೆಡುತೋಪು ಬೆಳೆಸಿದ್ದು, 1ನೇ ವರ್ಷದ ನಿರ್ವಹಣೆಯಲ್ಲಿ ಇರುತ್ತವೆ. ಇದಲ್ಲದೆ; ತೆರವುಗೊಳಿಸಿದ ಪ್ರದೇಶದ ಗಡಿಯನ್ನು ಒತ್ತುವರಿಯನ್ನು ಸಂರಕ್ಷಿಸುವ ಸಲುವಾಗಿ ಜಾನುವಾರು ನಿರೋಧ ಕಂದಕ ನಿರ್ಮಿಸಲಾಗಿದೆ. ಅದಕ್ಕೆ ₹ 3.25 ಕೋಟಿ ಖರ್ಚಾಗಿದೆ ಎಂದಿದ್ದಾರೆ.

ಆದರೆ, ಒತ್ತುವರಿದಾರ ನಾಗರಾಜು ಹಾಗೂ ಇನ್ನಿತರರು ರಿಟ್‌ ಅರ್ಜಿ ಸಂಬಂಧದ ಜಮೀನು ತಮ್ಮ ಪರ ಮಧ್ಯಂತರ ಆದೇಶ ಇದೆ ಎಂದು ಹೇಳಿ ಏಪ್ರಿಲ್‌ 5ರಂದು ಆರೇಳು ಟ್ರ್ಯಾಕ್ಟರ್‌ಗಳನ್ನು ತೆಗೆದುಕೊಂಡು ಅರಣ್ಯ ಪ್ರದೇಶಕ್ಕೆ ಅನಧಿಕೃತವಾಗಿ ಪ್ರವೇಶ ಮಾಡಿ ಸುಮಾರು 100 ಎಕರೆಯಷ್ಟು ನೆಡುತೋಪು ನಿರ್ಮಾಣ ಮಾಡಿರುವುದನ್ನು ಹಾಳು ಮಾಡಿದ್ದಾರೆ. ಈ ವಿಚಾರವನ್ನು ಕೋಲಾರ ಡಿಸಿಎಫ್‌ ದೂರವಾಣಿ ಮೂಲಕ ತಿಳಿಸಿರುವುದಾಗಿ ವರದಿಯಲ್ಲಿ ಸಿಎಫ್‌ ಉಲ್ಲೇಖಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಶ್ರೀನಿವಾಸಪುರ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ; ಅಧಿಕಾರಿ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಸಾಕ್ಷ್ಯಾಧಾರಗಳಿದ್ದು, ಅಧಿಕಾರಿ ವಿರುದ್ಧ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಶಿಸ್ತು ಪ್ರಾಧಿಕಾರಕ್ಕೆ ಮನವರಿಕೆಯಾಗಿದೆ. ಕನಾಟಕ ಅರಣ್ಯ ಸಂಹಿತೆ 1976ರಡಿ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವಿಫಲರಾಗಿರುವುದು ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮಗಳು 2021 ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಆಡಳಿತಾತ್ಮ ಹಿತದೃಷ್ಟಿಯಿಂದ, ಶಿಸ್ತು ಪರಿಪಾಲನೆಗಾಗಿ ಗಂಭೀರವಾಗಿ ಪರಿಗಣಿಸಲಾಗಿದೆ, ಅದ್ದರಿಂದ ಇಲಾಖೆಯ ವಿಚಾರಣೆ ಮತ್ತು ತನಿಖೆಯನ್ನು ಬಾಕಿ ಇರಿಸಿ ಅಮಾನತ್ತಿನಲ್ಲಿಡಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago