Politics

ಕನಕಗಿರಿ ಮಾಜಿ ಶಾಸಕರ ವಿವಾಹ ವಿಚಾರ ಮತ್ತೆ ಮುನ್ನಲೆಗೆ! ಡಿಡಿ ಶ್ವೇತಾ ಉಪಲೋಕಾಯುಕ್ತರ ಮುಂದೆ ಸ್ಫೋಟಕ ಹೇಳಿಕೆ

2022ರಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಸವರಾಜ್ ದಡೇಸುಗೂರು ಅವರ ಆಡಿಯೋ ಮತ್ತೆ ಸಂಚಲನ ಮೂಡಿಸಿರುವ ಘಟನೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಆ ವೇಳೆಗೆ ಭಾರೀ ವಿವಾದ ಸೃಷ್ಟಿಸಿದ್ದ ಆ ಮಾಧ್ಯಮದ ಸಂಭಾಷಣೆಯು ಈಗ ಮತ್ತೊಮ್ಮೆ ಪ್ರಸ್ತಾಪಕ್ಕೆ ಬಂದಿದೆ.

ಶಾಸಕರ ನಿರಾಕರಣೆ, ಆದರೆ ಈಗ ಅಧಿಕೃತ ಒಪ್ಪಿಗೆ?

2022ರಲ್ಲಿ ದಡೇಸುಗೂರು ಅವರ ಹೆಸರಿನಲ್ಲಿ ವೈರಲ್ ಆದ ಆಡಿಯೋಗೆ ಅವರು ತಕ್ಷಣವೇ ಸ್ಪಷ್ಟನೆ ನೀಡಿದ್ದು, ಅದು ತಮ್ಮದು ಅಲ್ಲ ಎಂದು ಹೇಳಿದ್ದರು. ಆದರೆ, ಈಗ ವಿಜಯನಗರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಡಿಡಿ ಶ್ವೇತಾ ಉಪಲೋಕಾಯುಕ್ತರ ಮುಂದೆ ಬಸವರಾಜ್ ದಡೇಸುಗೂರು ಅವರೇ ತಮ್ಮ ಪತಿ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇದರಿಂದಾಗಿ, ಈ ಪ್ರಕರಣಕ್ಕೆ ಹೊಸ ಮೈಲಿಗಲ್ಲು ಸೇರಿದಂತಾಗಿದೆ.

ಆಡಿಯೋ ಹಿನ್ನಲೆ: ಲವ್ ಕಂಆರೆಂಜ್ ಮ್ಯಾರೇಜ್?

ಅಂದು ಕೇವಲ ಆಡಿಯೋ ಮಾತ್ರವಿತ್ತು, ಆದರೆ ಈಗ ಡಿಡಿ ಶ್ವೇತಾ ಅವರ ಹೇಳಿಕೆಯಿಂದ ಅವರ ಸಂಬಂಧ ಅಧಿಕೃತವಾಗಿದೆ ಎಂಬ ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ. 2022ರಲ್ಲಿ ಪ್ರಚಲಿತವಾಗಿದ್ದ ಈ ಪ್ರೇಮಕಥೆ ಇದೀಗ ಮದುವೆಯಾಗಿ ಪರಿವರ್ತನೆಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉಪಲೋಕಾಯುಕ್ತರ ಮುಂದೆ ಬಯಲಾಯ್ತು ನಿಜ?

ಬಸವರಾಜ್ ದಡೇಸುಗೂರು, ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಕಾರಣ, ಈ ವಿಷಯವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಉಪಲೋಕಾಯುಕ್ತ ವೀರಪ್ಪ ಅವರ ವಿಚಾರಣೆಯ ವೇಳೆ, ಶ್ವೇತಾ ಅವರೇ “ಬಸವರಾಜ್ ದಡೇಸುಗೂರು ನನ್ನ ಪತಿ” ಎಂದು ಸ್ಪಷ್ಟವಾಗಿ ಉತ್ತರಿಸಿದಂತೆ ವರದಿಯಾಗಿದೆ. ಇದಲ್ಲದೆ, ಈ ಕುರಿತು ಈಗ ವಿಡಿಯೋ ಕೂಡ ವೈರಲ್ ಆಗಿದ್ದು, ಜನರಲ್ಲಿ ಕುತೂಹಲ ಮೂಡಿಸಿದೆ.

ಶಾಸಕರ ಮೌನ: ಮದುವೆ ಸತ್ಯವೋ?

2022ರಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ವಿಚಾರಕ್ಕೆ ಇದೀಗ ಮತ್ತೊಮ್ಮೆ ಪ್ರಾಮುಖ್ಯತೆ ದೊರೆತಿದೆ. ಆದರೆ, ಈ ಕುರಿತಾಗಿ ಬಸವರಾಜ್ ದಡೇಸುಗೂರು ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರ ಮೌನದಿಂದ ಜನರಲ್ಲಿ ಇನ್ನಷ್ಟು ಪ್ರಶ್ನೆಗಳು ಹುಟ್ಟಿಕೊಂಡಿವೆ—ಅವರು ಗುಪ್ತವಾಗಿ ಎರಡನೇ ಮದುವೆ ಮಾಡಿಕೊಂಡಿದ್ದಾರೆಯಾ? ಮದುವೆಯಾಗಿದ್ದರೂ ಇದನ್ನು ಬಹಿರಂಗಪಡಿಸದೇ ಇರಲು ಕಾರಣವೇನು?

ಈ ಬಗ್ಗೆ ಇನ್ನೂ ಅಧಿಕೃತ ಪ್ರತಿಕ್ರಿಯೆ ನಿರೀಕ್ಷೆಯಲ್ಲಿದೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

8 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

10 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

21 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

21 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

21 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

22 hours ago