2022ರಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಸವರಾಜ್ ದಡೇಸುಗೂರು ಅವರ ಆಡಿಯೋ ಮತ್ತೆ ಸಂಚಲನ ಮೂಡಿಸಿರುವ ಘಟನೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಆ ವೇಳೆಗೆ ಭಾರೀ ವಿವಾದ ಸೃಷ್ಟಿಸಿದ್ದ ಆ ಮಾಧ್ಯಮದ ಸಂಭಾಷಣೆಯು ಈಗ ಮತ್ತೊಮ್ಮೆ ಪ್ರಸ್ತಾಪಕ್ಕೆ ಬಂದಿದೆ.
ಶಾಸಕರ ನಿರಾಕರಣೆ, ಆದರೆ ಈಗ ಅಧಿಕೃತ ಒಪ್ಪಿಗೆ?
2022ರಲ್ಲಿ ದಡೇಸುಗೂರು ಅವರ ಹೆಸರಿನಲ್ಲಿ ವೈರಲ್ ಆದ ಆಡಿಯೋಗೆ ಅವರು ತಕ್ಷಣವೇ ಸ್ಪಷ್ಟನೆ ನೀಡಿದ್ದು, ಅದು ತಮ್ಮದು ಅಲ್ಲ ಎಂದು ಹೇಳಿದ್ದರು. ಆದರೆ, ಈಗ ವಿಜಯನಗರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಡಿಡಿ ಶ್ವೇತಾ ಉಪಲೋಕಾಯುಕ್ತರ ಮುಂದೆ ಬಸವರಾಜ್ ದಡೇಸುಗೂರು ಅವರೇ ತಮ್ಮ ಪತಿ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇದರಿಂದಾಗಿ, ಈ ಪ್ರಕರಣಕ್ಕೆ ಹೊಸ ಮೈಲಿಗಲ್ಲು ಸೇರಿದಂತಾಗಿದೆ.
ಆಡಿಯೋ ಹಿನ್ನಲೆ: ಲವ್ ಕಂಆರೆಂಜ್ ಮ್ಯಾರೇಜ್?
ಅಂದು ಕೇವಲ ಆಡಿಯೋ ಮಾತ್ರವಿತ್ತು, ಆದರೆ ಈಗ ಡಿಡಿ ಶ್ವೇತಾ ಅವರ ಹೇಳಿಕೆಯಿಂದ ಅವರ ಸಂಬಂಧ ಅಧಿಕೃತವಾಗಿದೆ ಎಂಬ ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ. 2022ರಲ್ಲಿ ಪ್ರಚಲಿತವಾಗಿದ್ದ ಈ ಪ್ರೇಮಕಥೆ ಇದೀಗ ಮದುವೆಯಾಗಿ ಪರಿವರ್ತನೆಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಪಲೋಕಾಯುಕ್ತರ ಮುಂದೆ ಬಯಲಾಯ್ತು ನಿಜ?
ಬಸವರಾಜ್ ದಡೇಸುಗೂರು, ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಕಾರಣ, ಈ ವಿಷಯವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಉಪಲೋಕಾಯುಕ್ತ ವೀರಪ್ಪ ಅವರ ವಿಚಾರಣೆಯ ವೇಳೆ, ಶ್ವೇತಾ ಅವರೇ “ಬಸವರಾಜ್ ದಡೇಸುಗೂರು ನನ್ನ ಪತಿ” ಎಂದು ಸ್ಪಷ್ಟವಾಗಿ ಉತ್ತರಿಸಿದಂತೆ ವರದಿಯಾಗಿದೆ. ಇದಲ್ಲದೆ, ಈ ಕುರಿತು ಈಗ ವಿಡಿಯೋ ಕೂಡ ವೈರಲ್ ಆಗಿದ್ದು, ಜನರಲ್ಲಿ ಕುತೂಹಲ ಮೂಡಿಸಿದೆ.
ಶಾಸಕರ ಮೌನ: ಮದುವೆ ಸತ್ಯವೋ?
2022ರಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ವಿಚಾರಕ್ಕೆ ಇದೀಗ ಮತ್ತೊಮ್ಮೆ ಪ್ರಾಮುಖ್ಯತೆ ದೊರೆತಿದೆ. ಆದರೆ, ಈ ಕುರಿತಾಗಿ ಬಸವರಾಜ್ ದಡೇಸುಗೂರು ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರ ಮೌನದಿಂದ ಜನರಲ್ಲಿ ಇನ್ನಷ್ಟು ಪ್ರಶ್ನೆಗಳು ಹುಟ್ಟಿಕೊಂಡಿವೆ—ಅವರು ಗುಪ್ತವಾಗಿ ಎರಡನೇ ಮದುವೆ ಮಾಡಿಕೊಂಡಿದ್ದಾರೆಯಾ? ಮದುವೆಯಾಗಿದ್ದರೂ ಇದನ್ನು ಬಹಿರಂಗಪಡಿಸದೇ ಇರಲು ಕಾರಣವೇನು?
ಈ ಬಗ್ಗೆ ಇನ್ನೂ ಅಧಿಕೃತ ಪ್ರತಿಕ್ರಿಯೆ ನಿರೀಕ್ಷೆಯಲ್ಲಿದೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…