2022ರಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಸವರಾಜ್ ದಡೇಸುಗೂರು ಅವರ ಆಡಿಯೋ ಮತ್ತೆ ಸಂಚಲನ ಮೂಡಿಸಿರುವ ಘಟನೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಆ ವೇಳೆಗೆ ಭಾರೀ ವಿವಾದ ಸೃಷ್ಟಿಸಿದ್ದ ಆ ಮಾಧ್ಯಮದ ಸಂಭಾಷಣೆಯು ಈಗ ಮತ್ತೊಮ್ಮೆ ಪ್ರಸ್ತಾಪಕ್ಕೆ ಬಂದಿದೆ.
ಶಾಸಕರ ನಿರಾಕರಣೆ, ಆದರೆ ಈಗ ಅಧಿಕೃತ ಒಪ್ಪಿಗೆ?
2022ರಲ್ಲಿ ದಡೇಸುಗೂರು ಅವರ ಹೆಸರಿನಲ್ಲಿ ವೈರಲ್ ಆದ ಆಡಿಯೋಗೆ ಅವರು ತಕ್ಷಣವೇ ಸ್ಪಷ್ಟನೆ ನೀಡಿದ್ದು, ಅದು ತಮ್ಮದು ಅಲ್ಲ ಎಂದು ಹೇಳಿದ್ದರು. ಆದರೆ, ಈಗ ವಿಜಯನಗರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಡಿಡಿ ಶ್ವೇತಾ ಉಪಲೋಕಾಯುಕ್ತರ ಮುಂದೆ ಬಸವರಾಜ್ ದಡೇಸುಗೂರು ಅವರೇ ತಮ್ಮ ಪತಿ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇದರಿಂದಾಗಿ, ಈ ಪ್ರಕರಣಕ್ಕೆ ಹೊಸ ಮೈಲಿಗಲ್ಲು ಸೇರಿದಂತಾಗಿದೆ.
ಆಡಿಯೋ ಹಿನ್ನಲೆ: ಲವ್ ಕಂಆರೆಂಜ್ ಮ್ಯಾರೇಜ್?
ಅಂದು ಕೇವಲ ಆಡಿಯೋ ಮಾತ್ರವಿತ್ತು, ಆದರೆ ಈಗ ಡಿಡಿ ಶ್ವೇತಾ ಅವರ ಹೇಳಿಕೆಯಿಂದ ಅವರ ಸಂಬಂಧ ಅಧಿಕೃತವಾಗಿದೆ ಎಂಬ ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ. 2022ರಲ್ಲಿ ಪ್ರಚಲಿತವಾಗಿದ್ದ ಈ ಪ್ರೇಮಕಥೆ ಇದೀಗ ಮದುವೆಯಾಗಿ ಪರಿವರ್ತನೆಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಪಲೋಕಾಯುಕ್ತರ ಮುಂದೆ ಬಯಲಾಯ್ತು ನಿಜ?
ಬಸವರಾಜ್ ದಡೇಸುಗೂರು, ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಕಾರಣ, ಈ ವಿಷಯವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಉಪಲೋಕಾಯುಕ್ತ ವೀರಪ್ಪ ಅವರ ವಿಚಾರಣೆಯ ವೇಳೆ, ಶ್ವೇತಾ ಅವರೇ “ಬಸವರಾಜ್ ದಡೇಸುಗೂರು ನನ್ನ ಪತಿ” ಎಂದು ಸ್ಪಷ್ಟವಾಗಿ ಉತ್ತರಿಸಿದಂತೆ ವರದಿಯಾಗಿದೆ. ಇದಲ್ಲದೆ, ಈ ಕುರಿತು ಈಗ ವಿಡಿಯೋ ಕೂಡ ವೈರಲ್ ಆಗಿದ್ದು, ಜನರಲ್ಲಿ ಕುತೂಹಲ ಮೂಡಿಸಿದೆ.
ಶಾಸಕರ ಮೌನ: ಮದುವೆ ಸತ್ಯವೋ?
2022ರಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ವಿಚಾರಕ್ಕೆ ಇದೀಗ ಮತ್ತೊಮ್ಮೆ ಪ್ರಾಮುಖ್ಯತೆ ದೊರೆತಿದೆ. ಆದರೆ, ಈ ಕುರಿತಾಗಿ ಬಸವರಾಜ್ ದಡೇಸುಗೂರು ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರ ಮೌನದಿಂದ ಜನರಲ್ಲಿ ಇನ್ನಷ್ಟು ಪ್ರಶ್ನೆಗಳು ಹುಟ್ಟಿಕೊಂಡಿವೆ—ಅವರು ಗುಪ್ತವಾಗಿ ಎರಡನೇ ಮದುವೆ ಮಾಡಿಕೊಂಡಿದ್ದಾರೆಯಾ? ಮದುವೆಯಾಗಿದ್ದರೂ ಇದನ್ನು ಬಹಿರಂಗಪಡಿಸದೇ ಇರಲು ಕಾರಣವೇನು?
ಈ ಬಗ್ಗೆ ಇನ್ನೂ ಅಧಿಕೃತ ಪ್ರತಿಕ್ರಿಯೆ ನಿರೀಕ್ಷೆಯಲ್ಲಿದೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…