ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯ ಪಿ & ಟಿ ಕಾಲೊನಿಯಲ್ಲಿ ಗುರುವಾರ ರಾತ್ರಿ ನಡೆದ ಭೀಕರ ಘಟನೆಯಲ್ಲಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.
ಅನಿಲ ವಿಠ್ಠಲ ರಾಠೋಡ (45) ಮೃತ ವ್ಯಕ್ತಿಯಾಗಿದ್ದು, ರುದ್ರವಾಡಿ ಆಸ್ಪತ್ರೆ ಎದುರಿನ ವೆಂಕಟೇಶ್ವರ ಕಾಂಪ್ಲೆಕ್ಸ್ನಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಮೂವರು ಅನಾಮಿಕರು ಆಟೊದಲ್ಲಿ ಬಂದು, ಅನಿಲ ಅವರು ಫೈನಾನ್ಸ್ ಕೆಲಸದಲ್ಲಿ ನಿರತರಾಗಿದ್ದ ವೇಳೆ ದಿಢೀರ್ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕ್ರೂರವಾಗಿ ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಅನಿಲ ರಾಠೋಡ ಅವರು ವಕೀಲಿಕೆ ಶಿಕ್ಷಣ ಪಡೆದಿದ್ದು, ನಂತರ ಫೈನಾನ್ಸ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು. ಅವರು ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯನಾಗಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಡಿಸಿಪಿ ಪ್ರವೀಣ ನಾಯಕ, ಎಸಿಪಿ ಶರಣಬಸಪ್ಪ ಸುಬೇದಾರ ಹಾಗೂ ಸ್ಟೇಷನ್ ಬಜಾರ್ ಇನ್ಸ್ಪೆಕ್ಟರ್ ಗುರು ಪಾಟೀಲ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಾಥಮಿಕ ತನಿಖೆಯ ಪ್ರಕಾರ, ಮೃತನ ಪರಿಚಯಸ್ಥರೇ ಈ ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಹಣಕಾಸಿನ ವ್ಯವಹಾರ ಸಂಬಂಧಿತ ವೈಮನಸ್ಸೇ ಹತ್ಯೆಗೆ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಗಣಿಸಿ ತನಿಖೆ ಮುಂದುವರಿಸಲಾಗುತ್ತಿದ್ದು, ಆರೋಪಿಗಳ ಬಂಧನಕ್ಕಾಗಿ ಎಸಿಪಿಗಳ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…