ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಸಮೀಪದ ಸುಮಾರು 16 ಎಕರೆ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳ ಮೂಲಕ ಭೂಗಳ್ಳರು ಅಕ್ರಮವಾಗಿ ಕಬಳಿಸಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಮಾಲೂರು ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ವೇಳೆ ಮಾಜಿ ಶಾಸಕ ಮಂಜುನಾಥ್ ಗೌಡ ಅವರು ಹಳೆಯ ಕಂದಾಯ ದಾಖಲೆಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ, ತೊರ್ನಹಳ್ಳಿ ಬಳಿಯಿರುವ ಈ ಜಮೀನು 1961ರ ಅಧಿಕೃತ ದಾಖಲೆಗಳ ಪ್ರಕಾರ ಸರ್ಕಾರಿ ಭೂಮಿಯಾಗಿ ದಾಖಲಾಗಿತ್ತು ಎಂದು ತಿಳಿಸಿದರು. ಆದರೆ 1963ರಲ್ಲಿ ಸರ್ಕಾರಿ ರಜಾ ದಿನದಂದೇ ಕೆಲ ಅಧಿಕಾರಿಗಳ ಶಾಮೀಲಿನಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಶೋಕ್ ಜೈನ್ ಎಂಬುವರ ಹೆಸರಿಗೆ ಅಕ್ರಮವಾಗಿ ಖಾತೆ ಬದಲಾವಣೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು.
ಪ್ರಸ್ತುತ ಈ ಜಮೀನಿನ ಮಾರುಕಟ್ಟೆ ಮೌಲ್ಯ ಸುಮಾರು 80 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದ್ದು, ಇದು ಜಿಲ್ಲೆಯ ಅತಿದೊಡ್ಡ ಭೂ ಹಗರಣಗಳಲ್ಲಿ ಒಂದಾಗಿರಬಹುದು ಎಂದು ಅವರು ಅಭಿಪ್ರಾಯಪಟ್ಟರು.
ತಹಶೀಲ್ದಾರ್ ರೂಪಾ ಅವರ ಸಮ್ಮುಖದಲ್ಲಿ ದಾಖಲೆಗಳನ್ನು ಮಂಡಿಸಿ ಅಕ್ರಮಗಳ ಕುರಿತು ಪ್ರಶ್ನೆಗಳನ್ನು ಕೇಳುತ್ತಿದ್ದ ವೇಳೆ, ಸೂಕ್ತ ಉತ್ತರ ನೀಡಲು ಸಾಧ್ಯವಾಗದೆ ತಹಶೀಲ್ದಾರ್ ಕಚೇರಿಯಿಂದ ಹೊರನಡೆದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಬೆಳವಣಿಗೆ ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಯಿತು.
ಇಂತಹ ಭೂ ಹಗರಣಕ್ಕೆ ಕಾರಣರಾದ ಅಂದಿನ ಹಾಗೂ ಇಂದಿನ ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಂಜುನಾಥ್ ಗೌಡ ಆಗ್ರಹಿಸಿದರು. ಜೊತೆಗೆ, ಅಕ್ರಮವಾಗಿ ಕಬಳಿಕೆಯಾಗಿರುವ 16 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆ ಕೂಡಲೇ ತನ್ನ ವಶಕ್ಕೆ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಳ್ಳದಿದ್ದಲ್ಲಿ, ತಾಲೂಕಿನಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಶಾಸಕ ಮಂಜುನಾಥ್ ಗೌಡ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಹಲವು ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹೈದರಾಬಾದ್ನ ಚಾದರ್ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…
ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್ಗಳನ್ನು ಹುಕ್ಕೇರಿ…
ದೆಹಲಿ ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…
ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…
ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…