ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಜಿ. ದೇವರಾಜ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಭರಮಸಾಗರ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನ್ಯಾಯಾಂಗ ಬಂಧನಕ್ಕೆ ಆದೇಶ
ಶನಿವಾರ ತಡರಾತ್ರಿ ದೇವರಾಜ್ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತ್ತಾದರೂ, ಚಿತ್ರದುರ್ಗದ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಗಂಗಾಧರ ಬಡಿಗೇರ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶಿಸಿದರು.
ಆರೋಪಗಳ ವಿವರ
ಸಂತ್ರಸ್ತ ಮಹಿಳೆಯರ ದೂರಿನ ಪ್ರಕಾರ, ದೇವರಾಜ್ ಅವರು ಪದೇಪದೇ ಲೆಕ್ಕಪತ್ರ ನೀಡುವಂತೆ ಒತ್ತಾಯಿಸುತ್ತಾ, ಮೈಮುಟ್ಟಲು ಹಾಗೂ ಪಕ್ಕದಲ್ಲಿ ಕುಳಿತುಕೊಳ್ಳಲು ಯತ್ನಿಸುತ್ತಿದ್ದರು. ಅಲ್ಲದೆ, ಸಾರ್ವಜನಿಕ ಸಮ್ಮುಖದಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.
ಇದೇ ವೇಳೆ, ದ್ವಿತೀಯ ದರ್ಜೆ ಸಹಾಯಕ (SDA) ಜಯರಾಮ ಅವರ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪವೂ ದೇವರಾಜ್ ಮೇಲೆ ಕೇಳಿಬಂದಿದ್ದು, ಈ ಸಂಬಂಧ ಭರಮಸಾಗರ ವೃತ್ತ ನಿರೀಕ್ಷಕ ಪಿ. ಪ್ರಸಾದ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ನಡೆಯುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…