Crime

ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ: ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಬಂಧನ

ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಜಿ. ದೇವರಾಜ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಭರಮಸಾಗರ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನ್ಯಾಯಾಂಗ ಬಂಧನಕ್ಕೆ ಆದೇಶ
ಶನಿವಾರ ತಡರಾತ್ರಿ ದೇವರಾಜ್‌ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತ್ತಾದರೂ, ಚಿತ್ರದುರ್ಗದ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಗಂಗಾಧರ ಬಡಿಗೇರ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶಿಸಿದರು.

ಆರೋಪಗಳ ವಿವರ
ಸಂತ್ರಸ್ತ ಮಹಿಳೆಯರ ದೂರಿನ ಪ್ರಕಾರ, ದೇವರಾಜ್‌ ಅವರು ಪದೇಪದೇ ಲೆಕ್ಕಪತ್ರ ನೀಡುವಂತೆ ಒತ್ತಾಯಿಸುತ್ತಾ, ಮೈಮುಟ್ಟಲು ಹಾಗೂ ಪಕ್ಕದಲ್ಲಿ ಕುಳಿತುಕೊಳ್ಳಲು ಯತ್ನಿಸುತ್ತಿದ್ದರು. ಅಲ್ಲದೆ, ಸಾರ್ವಜನಿಕ ಸಮ್ಮುಖದಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.

ಇದೇ ವೇಳೆ, ದ್ವಿತೀಯ ದರ್ಜೆ ಸಹಾಯಕ (SDA) ಜಯರಾಮ ಅವರ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪವೂ ದೇವರಾಜ್‌ ಮೇಲೆ ಕೇಳಿಬಂದಿದ್ದು, ಈ ಸಂಬಂಧ ಭರಮಸಾಗರ ವೃತ್ತ ನಿರೀಕ್ಷಕ ಪಿ. ಪ್ರಸಾದ್‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ನಡೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago