ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಜಿ. ದೇವರಾಜ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಭರಮಸಾಗರ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನ್ಯಾಯಾಂಗ ಬಂಧನಕ್ಕೆ ಆದೇಶ
ಶನಿವಾರ ತಡರಾತ್ರಿ ದೇವರಾಜ್ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತ್ತಾದರೂ, ಚಿತ್ರದುರ್ಗದ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಗಂಗಾಧರ ಬಡಿಗೇರ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶಿಸಿದರು.
ಆರೋಪಗಳ ವಿವರ
ಸಂತ್ರಸ್ತ ಮಹಿಳೆಯರ ದೂರಿನ ಪ್ರಕಾರ, ದೇವರಾಜ್ ಅವರು ಪದೇಪದೇ ಲೆಕ್ಕಪತ್ರ ನೀಡುವಂತೆ ಒತ್ತಾಯಿಸುತ್ತಾ, ಮೈಮುಟ್ಟಲು ಹಾಗೂ ಪಕ್ಕದಲ್ಲಿ ಕುಳಿತುಕೊಳ್ಳಲು ಯತ್ನಿಸುತ್ತಿದ್ದರು. ಅಲ್ಲದೆ, ಸಾರ್ವಜನಿಕ ಸಮ್ಮುಖದಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.
ಇದೇ ವೇಳೆ, ದ್ವಿತೀಯ ದರ್ಜೆ ಸಹಾಯಕ (SDA) ಜಯರಾಮ ಅವರ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪವೂ ದೇವರಾಜ್ ಮೇಲೆ ಕೇಳಿಬಂದಿದ್ದು, ಈ ಸಂಬಂಧ ಭರಮಸಾಗರ ವೃತ್ತ ನಿರೀಕ್ಷಕ ಪಿ. ಪ್ರಸಾದ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ನಡೆಯುತ್ತಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…