Crime

ಹನಿಟ್ರ್ಯಾಪ್ ಬಲೆಗೆ ಬಿದ್ದ ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ: ಬೆತ್ತಲೆ ವಿಡಿಯೋ ಬೆದರಿಕೆ, ಇಬ್ಬರು ಮಹಿಳೆಯರ ಬಂಧನ

ಹನಿಟ್ರ್ಯಾಪ್‌ ಗ್ಯಾಂಗ್ ಬಲೆಗೆ ಬಿದ್ದ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿಗೆ, ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದ ಯುವತಿ ಮತ್ತು ಆಕೆಯ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ಬೆಚ್ಚಿಬೀಳಿಸುವ ತಿರುವು ಪಡೆದಿದ್ದು, ಆರೋಪಿಗಳ ಪುತ್ತೂರಾಟ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.

ಫೇಸ್‌ಬುಕ್ ಚಾಟ್ ಮೂಲಕ ಬಲೆ ಬೀಸಿದ ಹನಿಟ್ರ್ಯಾಪ್ ಗ್ಯಾಂಗ್

ನಿಶಾ ಎಂಬ ಯುವತಿ, ಫೇಸ್‌ಬುಕ್ ಮೂಲಕ ಅಣ್ಣಪ್ಪ ಸ್ವಾಮಿಯೊಂದಿಗೆ ಸಂಪರ್ಕ ಸಾಧಿಸಿ, ನಿರಂತರ ಚಾಟಿಂಗ್ ಮತ್ತು ರಿಯಲ್ ಎಸ್ಟೇಟ್ ಹೂಡಿಕೆ ನೆಪದಲ್ಲಿ ಅವನೊಂದಿಗೆ ಆತ್ಮೀಯತೆ ಬೆಳೆಸಿದ್ದಾಳೆ. ನಿಷ್ಕಪಟ ಪ್ರೇಮ ನಾಟಕವಾಡಿ, ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಈ ಅವಧಿಯಲ್ಲಿ, ಅವರು ಹಲವೆಡೆಗಳಲ್ಲಿ ಸುತ್ತಾಡಿದ್ದು, ಕೆಲವು ಲಾಡ್ಜ್‌ಗಳಿಗೆ ಕರೆಯಿಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾಳೆ.

ಬೆತ್ತಲೆ ವಿಡಿಯೋ ಮೂಲಕ 20 ಲಕ್ಷ ಬೇಡಿಕೆ

ನಂತರ, ದೊಡ್ಡಬಳ್ಳಾಪುರದ ಲಾಡ್ಜ್ ಒಂದರಲ್ಲಿ ಅಣ್ಣಪ್ಪ ಸ್ವಾಮಿಯನ್ನು ಕರೆದೊಯ್ದು, ಅವನ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿ, 20 ಲಕ್ಷ ರೂಪಾಯಿ ನೀಡುವಂತೆ ಒತ್ತಾಯಿಸಿದ್ದಾಳೆ. ಹಣ ಕೊಡದಿದ್ದರೆ, ಅತ್ಯಾಚಾರ ಆರೋಪ ಹೊರೆಸುವುದಾಗಿಯೂ, ಬೆತ್ತಲೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿಯೂ ಬೆದರಿಸಿದ್ದಾಳೆ.

ಈ ಆಘಾತಕಾರಿ ಘಟನೆದಿಂದ ಭಯಗೊಂಡ ಅಣ್ಣಪ್ಪ ಸ್ವಾಮಿ, ಗುಬ್ಬಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಹನಿಟ್ರ್ಯಾಪ್ ನಡೆಸಿದ್ದ ಕ್ಯಾತಸಂದ್ರ ಮೂಲದ ನಿಶಾ ಮತ್ತು ಆಕೆಯ ಸ್ನೇಹಿತೆ ಜ್ಯೋತಿಯನ್ನು ಬಂಧಿಸಿದ್ದಾರೆ. ಜೊತೆಗೆ, ಈ ಅಪರಾಧದಲ್ಲಿ ಭಾಗಿಯಾಗಿದ್ದ ಗುಬ್ಬಿ ಮೂಲದ ಬಸವರಾಜು ಮತ್ತು ಭರತ್‌ನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಹಿನ್ನೆಲೆ: ಅಣ್ಣಪ್ಪ ಸ್ವಾಮಿ ಮತ್ತು ಅವನ ಮೇಲಿನ ಪ್ರಕರಣ

ಅನ್ನಪ್ಪ ಸ್ವಾಮಿ ಗುಬ್ಬಿ ಪಟ್ಟಣ ಪಂಚಾಯತಿ ಅಧ್ಯಕ್ಷನಾಗಿದ್ದಾನೆ. ಇದಕ್ಕೂ ಮೊದಲು, ತಾಲ್ಲೂಕಿನಲ್ಲಿ ನಡೆದ ಸಾವಿರಾರು ಎಕರೆ ಸರ್ಕಾರಿ ಜಮೀನು ಗೋಲ್ಮಾಲ್ ಪ್ರಕರಣದಲ್ಲಿ ಅವನನ್ನು ಎ2 ಆರೋಪಿ ಎಂದು ಗುರುತಿಸಲಾಗಿತ್ತು. ಅಧ್ಯಕ್ಷನಾಗಿದ್ದ ವೇಳೆ, ಮೂರು ತಿಂಗಳ ಕಾಲ ತಲೆಮರೆಸಿಕೊಂಡಿದ್ದ ಆತ, ಈಗ ಮತ್ತೆ ಹೊಸ ಪ್ರಕರಣದಿಂದ ಸುದ್ದಿಯಲ್ಲಿದ್ದಾನೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಇನ್ನಷ್ಟು ಆರೋಪಿಗಳನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

19 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

23 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

23 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

23 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

23 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago