Latest

ನಿಧಿ ಸಿಕ್ಕಿದೆ” ಎಂಬ ನಾಟಕ: ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಮೂವರು ವಂಚಕರು ಸಿಸಿಬಿ ಬಲೆಗೆ

ಬೆಂಗಳೂರು: ಮನೆಯ ಪಾಯ ಹಾಕುವಾಗ ನಿಧಿ ಸಿಕ್ಕಿದೆ ಎಂಬ ನಾಟಕವಾಡಿ, ಚಿನ್ನದ ಪಾಲಿಶ್ ಮಾಡಿದ ಮರದ ತುಂಡು ಮತ್ತು ಇಟ್ಟಿಗೆ ಮಾರಾಟ ಮಾಡುತ್ತಿದ್ದ ಮೂವರು ವಂಚಕರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬಂಧಿತರು ಯಾರು?
ಪೊಲೀಸರು ಬಂಧಿಸಿರುವ ಆರೋಪಿಗಳನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ, ಅನ್ವರ್ ಹುಸೇನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಮೂಲತಃ ಬಿಹಾರದವರು.

ಮೋಸದ ಮಾದರಿ
ಆರೋಪಿಗಳು ಜನರನ್ನು ಮೋಸಗೊಳಿಸುವುದಕ್ಕಾಗಿ ಶ್ರದ್ಧೆಯುಳ್ಳ ಮನೆಮಾಲಕರನ್ನು ಗುರಿಯಾಗಿಸಿಕೊಂಡಿದ್ದರು. ಮನೆ ಪಾಯ ಹಾಕುವಾಗ ಅಥವಾ ಪುನಾರ್ಮಾನ ನಡೆಸುವ ಸಂದರ್ಭದಲ್ಲಿ ನಿಧಿ ಸಿಕ್ಕಿದೆ ಎಂಬಂತೆ ಕಥೆ ಕಟ್ಟುತ್ತಿದ್ದರು. ಚಿನ್ನದ ಬಣ್ಣದ ಪಾಲಿಶ್ ಮಾಡಿದ ಮರದ ಹಲಗೆಗಳು, ಇಟ್ಟಿಗೆಗಳು ಚಿನ್ನದ ಟೋಕನ್ಸ್ ಆಗಿ ಮಾರಾಟ ಮಾಡುತ್ತಿದ್ದರು.

ನಂಬಿಕೆ ಗಳಿಸಲು ವಿಶೇಷ ತಂತ್ರ
ಜನರನ್ನು ಸಂಪೂರ್ಣ ನಂಬಿಸುವ ಉದ್ದೇಶದಿಂದ, ಆರಂಭದಲ್ಲಿ ಒಂದೆರಡು ಗ್ರಾಂ ನಿಜವಾದ ಚಿನ್ನ ನೀಡುತ್ತಿದ್ದರು. ಇದರಿಂದ ಖರೀದಿಸುವವರು ಮೋಸವಾದಿ ಎಂದು ಅನುಮಾನ ಪಡದೆ, ಹೆಚ್ಚಿನ ಚಿನ್ನ ಖರೀದಿಸಲು ಮುಂದಾಗುತ್ತಿದ್ದರು. ಇದನ್ನು ಅರಿತುಕೊಂಡ ಆರೋಪಿಗಳು ನಂತರ ನಕಲಿ ಚಿನ್ನವನ್ನು ಮಾರಾಟ ಮಾಡುತ್ತಿದ್ದರು.

ಸ್ಥಳ ಬದಲಿಸುವ ಚಾಲಾಕಿತನ
ಒಮ್ಮೆ ವಂಚನೆ ಮಾಡಿ ಹಣ ಪಡೆದುಕೊಂಡರೆ, ಆರೋಪಿಗಳು ತಕ್ಷಣವೇ ತಮ್ಮ ಸ್ಥಳ ಬದಲಾಯಿಸಿ ಬೇರೆಡೆ ತೆರಳುತ್ತಿದ್ದರು. ಅಲ್ಲದೇ, ತಮ್ಮ ಮೊಬೈಲ್ ಸಂಖ್ಯೆ ಯಾರಿಗೂ ನೀಡುತ್ತಿರಲಿಲ್ಲ ಅವರ ಮೇಲೆ ಅನುಮಾನ ಬಾರದಂತೆ ನೋಡಿಕೊಳ್ಳುತ್ತಿದ್ದರು.

ಸಿಸಿಬಿ ದಾಳಿ – ಮೂವರು ಬಂಧನ
ಈ ಕುರಿತು ಕೊರಮಂಗಲದ ಸಿಸಿಬಿ ಪೊಲೀಸರಿಗೆ ದೂರು ಬಂದ ಹಿನ್ನೆಲೆಯಲ್ಲಿ, ಪೊಲೀಸರು ಆರೋಪಿಗಳ ಕಾರ್ಯವೈಖರಿಯನ್ನು ನಿಗಾ ಇಟ್ಟು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 970 ಗ್ರಾಂ ನಕಲಿ ಚಿನ್ನ, ಒಂದು ವಾಹನ, ಮೂರು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಂಚನೆ ಪ್ರಕರಣಗಳ ಮಾಹಿತಿ ಲಭ್ಯ
ಪೊಲೀಸರು ಈ ಮೂವರು ಇನ್ನಷ್ಟು ಜನರನ್ನು ವಂಚಿಸಿರುವ ಸಾಧ್ಯತೆ ಇದೆ ಎಂದು ಶಂಕಿಸುತ್ತಿದ್ದು, ಮುಂದಿನ ತನಿಖೆ ಮುಂದುವರೆದಿದೆ. ಜನರು ಅಂಥ ವಂಚನೆಗಳಿಗೆ ತುತ್ತಾಗದಂತೆ ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

9 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

9 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago