Latest

ನಿಧಿ ಸಿಕ್ಕಿದೆ” ಎಂಬ ನಾಟಕ: ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಮೂವರು ವಂಚಕರು ಸಿಸಿಬಿ ಬಲೆಗೆ

ಬೆಂಗಳೂರು: ಮನೆಯ ಪಾಯ ಹಾಕುವಾಗ ನಿಧಿ ಸಿಕ್ಕಿದೆ ಎಂಬ ನಾಟಕವಾಡಿ, ಚಿನ್ನದ ಪಾಲಿಶ್ ಮಾಡಿದ ಮರದ ತುಂಡು ಮತ್ತು ಇಟ್ಟಿಗೆ ಮಾರಾಟ ಮಾಡುತ್ತಿದ್ದ ಮೂವರು ವಂಚಕರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬಂಧಿತರು ಯಾರು?
ಪೊಲೀಸರು ಬಂಧಿಸಿರುವ ಆರೋಪಿಗಳನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ, ಅನ್ವರ್ ಹುಸೇನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಮೂಲತಃ ಬಿಹಾರದವರು.

ಮೋಸದ ಮಾದರಿ
ಆರೋಪಿಗಳು ಜನರನ್ನು ಮೋಸಗೊಳಿಸುವುದಕ್ಕಾಗಿ ಶ್ರದ್ಧೆಯುಳ್ಳ ಮನೆಮಾಲಕರನ್ನು ಗುರಿಯಾಗಿಸಿಕೊಂಡಿದ್ದರು. ಮನೆ ಪಾಯ ಹಾಕುವಾಗ ಅಥವಾ ಪುನಾರ್ಮಾನ ನಡೆಸುವ ಸಂದರ್ಭದಲ್ಲಿ ನಿಧಿ ಸಿಕ್ಕಿದೆ ಎಂಬಂತೆ ಕಥೆ ಕಟ್ಟುತ್ತಿದ್ದರು. ಚಿನ್ನದ ಬಣ್ಣದ ಪಾಲಿಶ್ ಮಾಡಿದ ಮರದ ಹಲಗೆಗಳು, ಇಟ್ಟಿಗೆಗಳು ಚಿನ್ನದ ಟೋಕನ್ಸ್ ಆಗಿ ಮಾರಾಟ ಮಾಡುತ್ತಿದ್ದರು.

ನಂಬಿಕೆ ಗಳಿಸಲು ವಿಶೇಷ ತಂತ್ರ
ಜನರನ್ನು ಸಂಪೂರ್ಣ ನಂಬಿಸುವ ಉದ್ದೇಶದಿಂದ, ಆರಂಭದಲ್ಲಿ ಒಂದೆರಡು ಗ್ರಾಂ ನಿಜವಾದ ಚಿನ್ನ ನೀಡುತ್ತಿದ್ದರು. ಇದರಿಂದ ಖರೀದಿಸುವವರು ಮೋಸವಾದಿ ಎಂದು ಅನುಮಾನ ಪಡದೆ, ಹೆಚ್ಚಿನ ಚಿನ್ನ ಖರೀದಿಸಲು ಮುಂದಾಗುತ್ತಿದ್ದರು. ಇದನ್ನು ಅರಿತುಕೊಂಡ ಆರೋಪಿಗಳು ನಂತರ ನಕಲಿ ಚಿನ್ನವನ್ನು ಮಾರಾಟ ಮಾಡುತ್ತಿದ್ದರು.

ಸ್ಥಳ ಬದಲಿಸುವ ಚಾಲಾಕಿತನ
ಒಮ್ಮೆ ವಂಚನೆ ಮಾಡಿ ಹಣ ಪಡೆದುಕೊಂಡರೆ, ಆರೋಪಿಗಳು ತಕ್ಷಣವೇ ತಮ್ಮ ಸ್ಥಳ ಬದಲಾಯಿಸಿ ಬೇರೆಡೆ ತೆರಳುತ್ತಿದ್ದರು. ಅಲ್ಲದೇ, ತಮ್ಮ ಮೊಬೈಲ್ ಸಂಖ್ಯೆ ಯಾರಿಗೂ ನೀಡುತ್ತಿರಲಿಲ್ಲ ಅವರ ಮೇಲೆ ಅನುಮಾನ ಬಾರದಂತೆ ನೋಡಿಕೊಳ್ಳುತ್ತಿದ್ದರು.

ಸಿಸಿಬಿ ದಾಳಿ – ಮೂವರು ಬಂಧನ
ಈ ಕುರಿತು ಕೊರಮಂಗಲದ ಸಿಸಿಬಿ ಪೊಲೀಸರಿಗೆ ದೂರು ಬಂದ ಹಿನ್ನೆಲೆಯಲ್ಲಿ, ಪೊಲೀಸರು ಆರೋಪಿಗಳ ಕಾರ್ಯವೈಖರಿಯನ್ನು ನಿಗಾ ಇಟ್ಟು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 970 ಗ್ರಾಂ ನಕಲಿ ಚಿನ್ನ, ಒಂದು ವಾಹನ, ಮೂರು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಂಚನೆ ಪ್ರಕರಣಗಳ ಮಾಹಿತಿ ಲಭ್ಯ
ಪೊಲೀಸರು ಈ ಮೂವರು ಇನ್ನಷ್ಟು ಜನರನ್ನು ವಂಚಿಸಿರುವ ಸಾಧ್ಯತೆ ಇದೆ ಎಂದು ಶಂಕಿಸುತ್ತಿದ್ದು, ಮುಂದಿನ ತನಿಖೆ ಮುಂದುವರೆದಿದೆ. ಜನರು ಅಂಥ ವಂಚನೆಗಳಿಗೆ ತುತ್ತಾಗದಂತೆ ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

13 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

18 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

18 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

18 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

18 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

23 hours ago