Latest

ಮಹಿಳೆಯ ಕೊಲೆ ಪ್ರಕರಣಕ್ಕೆ ನಾಲ್ವರು ವಶ — ದೇಹವನ್ನು ತುಂಡುಮಾಡಿ 10ಕ್ಕೂ ಹೆಚ್ಚು ಕಡೆ ಎಸೆದ ಆರೋಪಿಗಳು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ನಡೆದ ಭೀಕರ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಮಹಿಳೆಯೊಬ್ಬಳನ್ನು ನಿರ್ದಯವಾಗಿ ಕೊಂದು, ಶವವನ್ನು ತುಂಡುಮಾಡಿ ವಿವಿಧ ಸ್ಥಳಗಳಲ್ಲಿ ಎಸೆದ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ಮೃತರನ್ನು ಲಕ್ಷ್ಮೀ ದೇವಮ್ಮ ಎಂದು ಗುರುತಿಸಲಾಗಿದ್ದು, ಈಕೆಯ ಅಳಿಯ ಡಾ. ರಾಮಚಂದ್ರ (ದಂತ ವೈದ್ಯ) ಸೇರಿ ಸತೀಶ್, ಕಿರಣ್ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಇವರ ವಿರುದ್ಧ ಭಾರಿ ಸಾಕ್ಷ್ಯಗಳು ದೊರೆತಿದ್ದು, ವಿಚಾರಣೆಯಲ್ಲಿಯೇ ಪ್ರಕರಣದ ಬಗೆ ಬಿಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಲಕ್ಷ್ಮೀ ದೇವಮ್ಮ ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಬೇಸತ್ತ ಡಾ. ರಾಮಚಂದ್ರ, ಸ್ನೇಹಿತರಾದ ಸತೀಶ್ ಮತ್ತು ಕಿರಣ್‌ ಸಹಾಯದಿಂದ ಕೊಲೆ ಯತ್ನ ರೂಪಿಸಿದ್ದರು. ಸತೀಶ್‌ ಫಾರ್ಮ್‌ಹೌಸ್‌ನಲ್ಲಿ ಕೊಲೆ ನಡೆದಿದ್ದು, ನಂತರ ಶವವನ್ನು ತುಂಡುಮಾಡಿ 10ಕ್ಕೂ ಹೆಚ್ಚು ಕಡೆ ಎಸೆಯಲಾಗಿದೆ ಎನ್ನಲಾಗಿದೆ.

ಘಟನೆಯ ನಂತರ ಆರೋಪಿಗಳು ಧರ್ಮಸ್ಥಳಕ್ಕೆ ಯಾತ್ರೆಗೆ ತೆರಳಿದ್ದರೂ, ಪೊಲೀಸರು ಅನುಮಾನಗೊಂಡು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ಘಟನೆಯ ಭೀಕರತೆ
ಆಗಸ್ಟ್ 7ರಂದು ಚಿಂಪುಗಾನಹಳ್ಳಿ ಬಳಿ ಮಹಿಳೆಯ ಕೈಗಳು ಸೇರಿದಂತೆ ಎಂಟು ಶವದ ತುಂಡುಗಳು ಪತ್ತೆಯಾಗಿದ್ದವು. ಮತ್ತೊಂದು ದಿನ, ಆಗಸ್ಟ್ 8ರಂದು ಸಿದ್ದರಬೆಟ್ಟ, ಮಲ್ಲೇಕಾವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಪ್ಪು ಕವರ್ ಪಾಕೆಟ್‌ಗಳಲ್ಲಿ ಕಾಲು, ದೇಹದ ಭಾಗಗಳು, ತಲೆ ಸೇರಿದಂತೆ 10ಕ್ಕೂ ಹೆಚ್ಚು ತುಂಡುಗಳು ಸಿಕ್ಕಿವೆ. ಒಟ್ಟಾರೆ ಚಿಂಪುಗಾನಹಳ್ಳಿ, ಮರೇನಾಯಕನಹಳ್ಳಿ, ಚಿಕ್ಕಾವಳಿ ಕೆರೆ, ಲಿಂಗಾಪುರ, ಜೋನಿಗರಹಳ್ಳಿ ಸೇರಿದಂತೆ ಹಲವೆಡೆ ಶವದ ಭಾಗಗಳು ಪತ್ತೆಯಾಗಿವೆ.

ಕೆಲವು ಪಾಕೆಟ್‌ಗಳಲ್ಲಿ ಕಬ್ಬಿಣದ ಮೇಟಲ್ ಪೀಸ್‌ಗಳೂ ಪತ್ತೆಯಾಗಿದ್ದು, ಇದರಿಂದ ಶವವನ್ನು ಪ್ಯಾಕ್ ಮಾಡುವ ವೇಳೆ ಬಳಸಿದ ಸಾಮಗ್ರಿಗಳ ಬಗ್ಗೆ ತನಿಖೆ ಮುಂದುವರಿದಿದೆ.

ಮೊದಲಿಗೆ ವಾಮಚಾರ ಶಂಕೆ, ಈಗ ಕೊಲೆ ದೃಢ
ಘಟನೆಯ ಆರಂಭದಲ್ಲಿ, ಹಲವು ಕಡೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿರುವುದರಿಂದ ವಾಮಚಾರಕ್ಕೆ ಸಂಬಂಧಿಸಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಇದೀಗ ತನಿಖೆಯಿಂದ ಇದು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಎನ್ನುವುದು ಸ್ಪಷ್ಟವಾಗಿದೆ.

ಮೃತಳ ಕೈ ಮೇಲೆ ಎರಡು ಟ್ಯಾಟೂಗಳು ಪತ್ತೆಯಾಗಿದ್ದು, ಗುರುತಿನ ಮಾಹಿತಿ ದೊರಕಲು ಸಹಾಯವಾಯಿತು. ಶವದ ಎಲ್ಲಾ ಭಾಗಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದ್ದು, ಹೆಚ್ಚಿನ ವೈಜ್ಞಾನಿಕ ತನಿಖೆ ಮುಂದುವರಿದಿದೆ.

ಪೊಲೀಸ್ ಹೇಳಿಕೆ
“ಈ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ತುಮಕೂರು ಜಿಲ್ಲಾ ಎಸ್‌ಪಿ ಅಶೋಕ್ ವೆಂಕಟ್ ತಿಳಿಸಿದ್ದಾರೆ.

ಈ ಘಟನೆ ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ಕಾಲದಲ್ಲಿ ದಾಖಲಾಗಿರುವ ಅತ್ಯಂತ ಭೀಕರ ಹತ್ಯೆಯಾಗಿ ದಾಖಲಾಗಿದ್ದು, ಸ್ಥಳೀಯರಲ್ಲಿ ಭೀತಿ ಮತ್ತು ಆಕ್ರೋಶ ಉಂಟುಮಾಡಿದೆ.

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

23 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago