Latest

ಮಹಿಳೆಯ ಕೊಲೆ ಪ್ರಕರಣಕ್ಕೆ ನಾಲ್ವರು ವಶ — ದೇಹವನ್ನು ತುಂಡುಮಾಡಿ 10ಕ್ಕೂ ಹೆಚ್ಚು ಕಡೆ ಎಸೆದ ಆರೋಪಿಗಳು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ನಡೆದ ಭೀಕರ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಮಹಿಳೆಯೊಬ್ಬಳನ್ನು ನಿರ್ದಯವಾಗಿ ಕೊಂದು, ಶವವನ್ನು ತುಂಡುಮಾಡಿ ವಿವಿಧ ಸ್ಥಳಗಳಲ್ಲಿ ಎಸೆದ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ಮೃತರನ್ನು ಲಕ್ಷ್ಮೀ ದೇವಮ್ಮ ಎಂದು ಗುರುತಿಸಲಾಗಿದ್ದು, ಈಕೆಯ ಅಳಿಯ ಡಾ. ರಾಮಚಂದ್ರ (ದಂತ ವೈದ್ಯ) ಸೇರಿ ಸತೀಶ್, ಕಿರಣ್ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಇವರ ವಿರುದ್ಧ ಭಾರಿ ಸಾಕ್ಷ್ಯಗಳು ದೊರೆತಿದ್ದು, ವಿಚಾರಣೆಯಲ್ಲಿಯೇ ಪ್ರಕರಣದ ಬಗೆ ಬಿಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಲಕ್ಷ್ಮೀ ದೇವಮ್ಮ ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಬೇಸತ್ತ ಡಾ. ರಾಮಚಂದ್ರ, ಸ್ನೇಹಿತರಾದ ಸತೀಶ್ ಮತ್ತು ಕಿರಣ್‌ ಸಹಾಯದಿಂದ ಕೊಲೆ ಯತ್ನ ರೂಪಿಸಿದ್ದರು. ಸತೀಶ್‌ ಫಾರ್ಮ್‌ಹೌಸ್‌ನಲ್ಲಿ ಕೊಲೆ ನಡೆದಿದ್ದು, ನಂತರ ಶವವನ್ನು ತುಂಡುಮಾಡಿ 10ಕ್ಕೂ ಹೆಚ್ಚು ಕಡೆ ಎಸೆಯಲಾಗಿದೆ ಎನ್ನಲಾಗಿದೆ.

ಘಟನೆಯ ನಂತರ ಆರೋಪಿಗಳು ಧರ್ಮಸ್ಥಳಕ್ಕೆ ಯಾತ್ರೆಗೆ ತೆರಳಿದ್ದರೂ, ಪೊಲೀಸರು ಅನುಮಾನಗೊಂಡು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ಘಟನೆಯ ಭೀಕರತೆ
ಆಗಸ್ಟ್ 7ರಂದು ಚಿಂಪುಗಾನಹಳ್ಳಿ ಬಳಿ ಮಹಿಳೆಯ ಕೈಗಳು ಸೇರಿದಂತೆ ಎಂಟು ಶವದ ತುಂಡುಗಳು ಪತ್ತೆಯಾಗಿದ್ದವು. ಮತ್ತೊಂದು ದಿನ, ಆಗಸ್ಟ್ 8ರಂದು ಸಿದ್ದರಬೆಟ್ಟ, ಮಲ್ಲೇಕಾವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಪ್ಪು ಕವರ್ ಪಾಕೆಟ್‌ಗಳಲ್ಲಿ ಕಾಲು, ದೇಹದ ಭಾಗಗಳು, ತಲೆ ಸೇರಿದಂತೆ 10ಕ್ಕೂ ಹೆಚ್ಚು ತುಂಡುಗಳು ಸಿಕ್ಕಿವೆ. ಒಟ್ಟಾರೆ ಚಿಂಪುಗಾನಹಳ್ಳಿ, ಮರೇನಾಯಕನಹಳ್ಳಿ, ಚಿಕ್ಕಾವಳಿ ಕೆರೆ, ಲಿಂಗಾಪುರ, ಜೋನಿಗರಹಳ್ಳಿ ಸೇರಿದಂತೆ ಹಲವೆಡೆ ಶವದ ಭಾಗಗಳು ಪತ್ತೆಯಾಗಿವೆ.

ಕೆಲವು ಪಾಕೆಟ್‌ಗಳಲ್ಲಿ ಕಬ್ಬಿಣದ ಮೇಟಲ್ ಪೀಸ್‌ಗಳೂ ಪತ್ತೆಯಾಗಿದ್ದು, ಇದರಿಂದ ಶವವನ್ನು ಪ್ಯಾಕ್ ಮಾಡುವ ವೇಳೆ ಬಳಸಿದ ಸಾಮಗ್ರಿಗಳ ಬಗ್ಗೆ ತನಿಖೆ ಮುಂದುವರಿದಿದೆ.

ಮೊದಲಿಗೆ ವಾಮಚಾರ ಶಂಕೆ, ಈಗ ಕೊಲೆ ದೃಢ
ಘಟನೆಯ ಆರಂಭದಲ್ಲಿ, ಹಲವು ಕಡೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿರುವುದರಿಂದ ವಾಮಚಾರಕ್ಕೆ ಸಂಬಂಧಿಸಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಇದೀಗ ತನಿಖೆಯಿಂದ ಇದು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಎನ್ನುವುದು ಸ್ಪಷ್ಟವಾಗಿದೆ.

ಮೃತಳ ಕೈ ಮೇಲೆ ಎರಡು ಟ್ಯಾಟೂಗಳು ಪತ್ತೆಯಾಗಿದ್ದು, ಗುರುತಿನ ಮಾಹಿತಿ ದೊರಕಲು ಸಹಾಯವಾಯಿತು. ಶವದ ಎಲ್ಲಾ ಭಾಗಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದ್ದು, ಹೆಚ್ಚಿನ ವೈಜ್ಞಾನಿಕ ತನಿಖೆ ಮುಂದುವರಿದಿದೆ.

ಪೊಲೀಸ್ ಹೇಳಿಕೆ
“ಈ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ತುಮಕೂರು ಜಿಲ್ಲಾ ಎಸ್‌ಪಿ ಅಶೋಕ್ ವೆಂಕಟ್ ತಿಳಿಸಿದ್ದಾರೆ.

ಈ ಘಟನೆ ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ಕಾಲದಲ್ಲಿ ದಾಖಲಾಗಿರುವ ಅತ್ಯಂತ ಭೀಕರ ಹತ್ಯೆಯಾಗಿ ದಾಖಲಾಗಿದ್ದು, ಸ್ಥಳೀಯರಲ್ಲಿ ಭೀತಿ ಮತ್ತು ಆಕ್ರೋಶ ಉಂಟುಮಾಡಿದೆ.

nazeer ahamad

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

2 weeks ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

2 weeks ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

2 weeks ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

2 weeks ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

2 weeks ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

2 weeks ago