Latest

ಮಹಿಳೆಯ ಕೊಲೆ ಪ್ರಕರಣಕ್ಕೆ ನಾಲ್ವರು ವಶ — ದೇಹವನ್ನು ತುಂಡುಮಾಡಿ 10ಕ್ಕೂ ಹೆಚ್ಚು ಕಡೆ ಎಸೆದ ಆರೋಪಿಗಳು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ನಡೆದ ಭೀಕರ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಮಹಿಳೆಯೊಬ್ಬಳನ್ನು ನಿರ್ದಯವಾಗಿ ಕೊಂದು, ಶವವನ್ನು ತುಂಡುಮಾಡಿ ವಿವಿಧ ಸ್ಥಳಗಳಲ್ಲಿ ಎಸೆದ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ಮೃತರನ್ನು ಲಕ್ಷ್ಮೀ ದೇವಮ್ಮ ಎಂದು ಗುರುತಿಸಲಾಗಿದ್ದು, ಈಕೆಯ ಅಳಿಯ ಡಾ. ರಾಮಚಂದ್ರ (ದಂತ ವೈದ್ಯ) ಸೇರಿ ಸತೀಶ್, ಕಿರಣ್ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಇವರ ವಿರುದ್ಧ ಭಾರಿ ಸಾಕ್ಷ್ಯಗಳು ದೊರೆತಿದ್ದು, ವಿಚಾರಣೆಯಲ್ಲಿಯೇ ಪ್ರಕರಣದ ಬಗೆ ಬಿಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಲಕ್ಷ್ಮೀ ದೇವಮ್ಮ ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಬೇಸತ್ತ ಡಾ. ರಾಮಚಂದ್ರ, ಸ್ನೇಹಿತರಾದ ಸತೀಶ್ ಮತ್ತು ಕಿರಣ್‌ ಸಹಾಯದಿಂದ ಕೊಲೆ ಯತ್ನ ರೂಪಿಸಿದ್ದರು. ಸತೀಶ್‌ ಫಾರ್ಮ್‌ಹೌಸ್‌ನಲ್ಲಿ ಕೊಲೆ ನಡೆದಿದ್ದು, ನಂತರ ಶವವನ್ನು ತುಂಡುಮಾಡಿ 10ಕ್ಕೂ ಹೆಚ್ಚು ಕಡೆ ಎಸೆಯಲಾಗಿದೆ ಎನ್ನಲಾಗಿದೆ.

ಘಟನೆಯ ನಂತರ ಆರೋಪಿಗಳು ಧರ್ಮಸ್ಥಳಕ್ಕೆ ಯಾತ್ರೆಗೆ ತೆರಳಿದ್ದರೂ, ಪೊಲೀಸರು ಅನುಮಾನಗೊಂಡು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ಘಟನೆಯ ಭೀಕರತೆ
ಆಗಸ್ಟ್ 7ರಂದು ಚಿಂಪುಗಾನಹಳ್ಳಿ ಬಳಿ ಮಹಿಳೆಯ ಕೈಗಳು ಸೇರಿದಂತೆ ಎಂಟು ಶವದ ತುಂಡುಗಳು ಪತ್ತೆಯಾಗಿದ್ದವು. ಮತ್ತೊಂದು ದಿನ, ಆಗಸ್ಟ್ 8ರಂದು ಸಿದ್ದರಬೆಟ್ಟ, ಮಲ್ಲೇಕಾವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಪ್ಪು ಕವರ್ ಪಾಕೆಟ್‌ಗಳಲ್ಲಿ ಕಾಲು, ದೇಹದ ಭಾಗಗಳು, ತಲೆ ಸೇರಿದಂತೆ 10ಕ್ಕೂ ಹೆಚ್ಚು ತುಂಡುಗಳು ಸಿಕ್ಕಿವೆ. ಒಟ್ಟಾರೆ ಚಿಂಪುಗಾನಹಳ್ಳಿ, ಮರೇನಾಯಕನಹಳ್ಳಿ, ಚಿಕ್ಕಾವಳಿ ಕೆರೆ, ಲಿಂಗಾಪುರ, ಜೋನಿಗರಹಳ್ಳಿ ಸೇರಿದಂತೆ ಹಲವೆಡೆ ಶವದ ಭಾಗಗಳು ಪತ್ತೆಯಾಗಿವೆ.

ಕೆಲವು ಪಾಕೆಟ್‌ಗಳಲ್ಲಿ ಕಬ್ಬಿಣದ ಮೇಟಲ್ ಪೀಸ್‌ಗಳೂ ಪತ್ತೆಯಾಗಿದ್ದು, ಇದರಿಂದ ಶವವನ್ನು ಪ್ಯಾಕ್ ಮಾಡುವ ವೇಳೆ ಬಳಸಿದ ಸಾಮಗ್ರಿಗಳ ಬಗ್ಗೆ ತನಿಖೆ ಮುಂದುವರಿದಿದೆ.

ಮೊದಲಿಗೆ ವಾಮಚಾರ ಶಂಕೆ, ಈಗ ಕೊಲೆ ದೃಢ
ಘಟನೆಯ ಆರಂಭದಲ್ಲಿ, ಹಲವು ಕಡೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿರುವುದರಿಂದ ವಾಮಚಾರಕ್ಕೆ ಸಂಬಂಧಿಸಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಇದೀಗ ತನಿಖೆಯಿಂದ ಇದು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಎನ್ನುವುದು ಸ್ಪಷ್ಟವಾಗಿದೆ.

ಮೃತಳ ಕೈ ಮೇಲೆ ಎರಡು ಟ್ಯಾಟೂಗಳು ಪತ್ತೆಯಾಗಿದ್ದು, ಗುರುತಿನ ಮಾಹಿತಿ ದೊರಕಲು ಸಹಾಯವಾಯಿತು. ಶವದ ಎಲ್ಲಾ ಭಾಗಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದ್ದು, ಹೆಚ್ಚಿನ ವೈಜ್ಞಾನಿಕ ತನಿಖೆ ಮುಂದುವರಿದಿದೆ.

ಪೊಲೀಸ್ ಹೇಳಿಕೆ
“ಈ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ತುಮಕೂರು ಜಿಲ್ಲಾ ಎಸ್‌ಪಿ ಅಶೋಕ್ ವೆಂಕಟ್ ತಿಳಿಸಿದ್ದಾರೆ.

ಈ ಘಟನೆ ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ಕಾಲದಲ್ಲಿ ದಾಖಲಾಗಿರುವ ಅತ್ಯಂತ ಭೀಕರ ಹತ್ಯೆಯಾಗಿ ದಾಖಲಾಗಿದ್ದು, ಸ್ಥಳೀಯರಲ್ಲಿ ಭೀತಿ ಮತ್ತು ಆಕ್ರೋಶ ಉಂಟುಮಾಡಿದೆ.

nazeer ahamad

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago