Latest

ಮಹಿಳೆಯ ಕೊಲೆ ಪ್ರಕರಣಕ್ಕೆ ನಾಲ್ವರು ವಶ — ದೇಹವನ್ನು ತುಂಡುಮಾಡಿ 10ಕ್ಕೂ ಹೆಚ್ಚು ಕಡೆ ಎಸೆದ ಆರೋಪಿಗಳು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ನಡೆದ ಭೀಕರ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಮಹಿಳೆಯೊಬ್ಬಳನ್ನು ನಿರ್ದಯವಾಗಿ ಕೊಂದು, ಶವವನ್ನು ತುಂಡುಮಾಡಿ ವಿವಿಧ ಸ್ಥಳಗಳಲ್ಲಿ ಎಸೆದ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ಮೃತರನ್ನು ಲಕ್ಷ್ಮೀ ದೇವಮ್ಮ ಎಂದು ಗುರುತಿಸಲಾಗಿದ್ದು, ಈಕೆಯ ಅಳಿಯ ಡಾ. ರಾಮಚಂದ್ರ (ದಂತ ವೈದ್ಯ) ಸೇರಿ ಸತೀಶ್, ಕಿರಣ್ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಇವರ ವಿರುದ್ಧ ಭಾರಿ ಸಾಕ್ಷ್ಯಗಳು ದೊರೆತಿದ್ದು, ವಿಚಾರಣೆಯಲ್ಲಿಯೇ ಪ್ರಕರಣದ ಬಗೆ ಬಿಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಲಕ್ಷ್ಮೀ ದೇವಮ್ಮ ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಬೇಸತ್ತ ಡಾ. ರಾಮಚಂದ್ರ, ಸ್ನೇಹಿತರಾದ ಸತೀಶ್ ಮತ್ತು ಕಿರಣ್‌ ಸಹಾಯದಿಂದ ಕೊಲೆ ಯತ್ನ ರೂಪಿಸಿದ್ದರು. ಸತೀಶ್‌ ಫಾರ್ಮ್‌ಹೌಸ್‌ನಲ್ಲಿ ಕೊಲೆ ನಡೆದಿದ್ದು, ನಂತರ ಶವವನ್ನು ತುಂಡುಮಾಡಿ 10ಕ್ಕೂ ಹೆಚ್ಚು ಕಡೆ ಎಸೆಯಲಾಗಿದೆ ಎನ್ನಲಾಗಿದೆ.

ಘಟನೆಯ ನಂತರ ಆರೋಪಿಗಳು ಧರ್ಮಸ್ಥಳಕ್ಕೆ ಯಾತ್ರೆಗೆ ತೆರಳಿದ್ದರೂ, ಪೊಲೀಸರು ಅನುಮಾನಗೊಂಡು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ಘಟನೆಯ ಭೀಕರತೆ
ಆಗಸ್ಟ್ 7ರಂದು ಚಿಂಪುಗಾನಹಳ್ಳಿ ಬಳಿ ಮಹಿಳೆಯ ಕೈಗಳು ಸೇರಿದಂತೆ ಎಂಟು ಶವದ ತುಂಡುಗಳು ಪತ್ತೆಯಾಗಿದ್ದವು. ಮತ್ತೊಂದು ದಿನ, ಆಗಸ್ಟ್ 8ರಂದು ಸಿದ್ದರಬೆಟ್ಟ, ಮಲ್ಲೇಕಾವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಪ್ಪು ಕವರ್ ಪಾಕೆಟ್‌ಗಳಲ್ಲಿ ಕಾಲು, ದೇಹದ ಭಾಗಗಳು, ತಲೆ ಸೇರಿದಂತೆ 10ಕ್ಕೂ ಹೆಚ್ಚು ತುಂಡುಗಳು ಸಿಕ್ಕಿವೆ. ಒಟ್ಟಾರೆ ಚಿಂಪುಗಾನಹಳ್ಳಿ, ಮರೇನಾಯಕನಹಳ್ಳಿ, ಚಿಕ್ಕಾವಳಿ ಕೆರೆ, ಲಿಂಗಾಪುರ, ಜೋನಿಗರಹಳ್ಳಿ ಸೇರಿದಂತೆ ಹಲವೆಡೆ ಶವದ ಭಾಗಗಳು ಪತ್ತೆಯಾಗಿವೆ.

ಕೆಲವು ಪಾಕೆಟ್‌ಗಳಲ್ಲಿ ಕಬ್ಬಿಣದ ಮೇಟಲ್ ಪೀಸ್‌ಗಳೂ ಪತ್ತೆಯಾಗಿದ್ದು, ಇದರಿಂದ ಶವವನ್ನು ಪ್ಯಾಕ್ ಮಾಡುವ ವೇಳೆ ಬಳಸಿದ ಸಾಮಗ್ರಿಗಳ ಬಗ್ಗೆ ತನಿಖೆ ಮುಂದುವರಿದಿದೆ.

ಮೊದಲಿಗೆ ವಾಮಚಾರ ಶಂಕೆ, ಈಗ ಕೊಲೆ ದೃಢ
ಘಟನೆಯ ಆರಂಭದಲ್ಲಿ, ಹಲವು ಕಡೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿರುವುದರಿಂದ ವಾಮಚಾರಕ್ಕೆ ಸಂಬಂಧಿಸಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಇದೀಗ ತನಿಖೆಯಿಂದ ಇದು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಎನ್ನುವುದು ಸ್ಪಷ್ಟವಾಗಿದೆ.

ಮೃತಳ ಕೈ ಮೇಲೆ ಎರಡು ಟ್ಯಾಟೂಗಳು ಪತ್ತೆಯಾಗಿದ್ದು, ಗುರುತಿನ ಮಾಹಿತಿ ದೊರಕಲು ಸಹಾಯವಾಯಿತು. ಶವದ ಎಲ್ಲಾ ಭಾಗಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದ್ದು, ಹೆಚ್ಚಿನ ವೈಜ್ಞಾನಿಕ ತನಿಖೆ ಮುಂದುವರಿದಿದೆ.

ಪೊಲೀಸ್ ಹೇಳಿಕೆ
“ಈ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ತುಮಕೂರು ಜಿಲ್ಲಾ ಎಸ್‌ಪಿ ಅಶೋಕ್ ವೆಂಕಟ್ ತಿಳಿಸಿದ್ದಾರೆ.

ಈ ಘಟನೆ ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ಕಾಲದಲ್ಲಿ ದಾಖಲಾಗಿರುವ ಅತ್ಯಂತ ಭೀಕರ ಹತ್ಯೆಯಾಗಿ ದಾಖಲಾಗಿದ್ದು, ಸ್ಥಳೀಯರಲ್ಲಿ ಭೀತಿ ಮತ್ತು ಆಕ್ರೋಶ ಉಂಟುಮಾಡಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago