ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ನಡೆದ ಭೀಕರ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಮಹಿಳೆಯೊಬ್ಬಳನ್ನು ನಿರ್ದಯವಾಗಿ ಕೊಂದು, ಶವವನ್ನು ತುಂಡುಮಾಡಿ ವಿವಿಧ ಸ್ಥಳಗಳಲ್ಲಿ ಎಸೆದ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಮೃತರನ್ನು ಲಕ್ಷ್ಮೀ ದೇವಮ್ಮ ಎಂದು ಗುರುತಿಸಲಾಗಿದ್ದು, ಈಕೆಯ ಅಳಿಯ ಡಾ. ರಾಮಚಂದ್ರ (ದಂತ ವೈದ್ಯ) ಸೇರಿ ಸತೀಶ್, ಕಿರಣ್ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಇವರ ವಿರುದ್ಧ ಭಾರಿ ಸಾಕ್ಷ್ಯಗಳು ದೊರೆತಿದ್ದು, ವಿಚಾರಣೆಯಲ್ಲಿಯೇ ಪ್ರಕರಣದ ಬಗೆ ಬಿಚ್ಚಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಲಕ್ಷ್ಮೀ ದೇವಮ್ಮ ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಬೇಸತ್ತ ಡಾ. ರಾಮಚಂದ್ರ, ಸ್ನೇಹಿತರಾದ ಸತೀಶ್ ಮತ್ತು ಕಿರಣ್ ಸಹಾಯದಿಂದ ಕೊಲೆ ಯತ್ನ ರೂಪಿಸಿದ್ದರು. ಸತೀಶ್ ಫಾರ್ಮ್ಹೌಸ್ನಲ್ಲಿ ಕೊಲೆ ನಡೆದಿದ್ದು, ನಂತರ ಶವವನ್ನು ತುಂಡುಮಾಡಿ 10ಕ್ಕೂ ಹೆಚ್ಚು ಕಡೆ ಎಸೆಯಲಾಗಿದೆ ಎನ್ನಲಾಗಿದೆ.
ಘಟನೆಯ ನಂತರ ಆರೋಪಿಗಳು ಧರ್ಮಸ್ಥಳಕ್ಕೆ ಯಾತ್ರೆಗೆ ತೆರಳಿದ್ದರೂ, ಪೊಲೀಸರು ಅನುಮಾನಗೊಂಡು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
ಘಟನೆಯ ಭೀಕರತೆ
ಆಗಸ್ಟ್ 7ರಂದು ಚಿಂಪುಗಾನಹಳ್ಳಿ ಬಳಿ ಮಹಿಳೆಯ ಕೈಗಳು ಸೇರಿದಂತೆ ಎಂಟು ಶವದ ತುಂಡುಗಳು ಪತ್ತೆಯಾಗಿದ್ದವು. ಮತ್ತೊಂದು ದಿನ, ಆಗಸ್ಟ್ 8ರಂದು ಸಿದ್ದರಬೆಟ್ಟ, ಮಲ್ಲೇಕಾವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಪ್ಪು ಕವರ್ ಪಾಕೆಟ್ಗಳಲ್ಲಿ ಕಾಲು, ದೇಹದ ಭಾಗಗಳು, ತಲೆ ಸೇರಿದಂತೆ 10ಕ್ಕೂ ಹೆಚ್ಚು ತುಂಡುಗಳು ಸಿಕ್ಕಿವೆ. ಒಟ್ಟಾರೆ ಚಿಂಪುಗಾನಹಳ್ಳಿ, ಮರೇನಾಯಕನಹಳ್ಳಿ, ಚಿಕ್ಕಾವಳಿ ಕೆರೆ, ಲಿಂಗಾಪುರ, ಜೋನಿಗರಹಳ್ಳಿ ಸೇರಿದಂತೆ ಹಲವೆಡೆ ಶವದ ಭಾಗಗಳು ಪತ್ತೆಯಾಗಿವೆ.
ಕೆಲವು ಪಾಕೆಟ್ಗಳಲ್ಲಿ ಕಬ್ಬಿಣದ ಮೇಟಲ್ ಪೀಸ್ಗಳೂ ಪತ್ತೆಯಾಗಿದ್ದು, ಇದರಿಂದ ಶವವನ್ನು ಪ್ಯಾಕ್ ಮಾಡುವ ವೇಳೆ ಬಳಸಿದ ಸಾಮಗ್ರಿಗಳ ಬಗ್ಗೆ ತನಿಖೆ ಮುಂದುವರಿದಿದೆ.
ಮೊದಲಿಗೆ ವಾಮಚಾರ ಶಂಕೆ, ಈಗ ಕೊಲೆ ದೃಢ
ಘಟನೆಯ ಆರಂಭದಲ್ಲಿ, ಹಲವು ಕಡೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿರುವುದರಿಂದ ವಾಮಚಾರಕ್ಕೆ ಸಂಬಂಧಿಸಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಇದೀಗ ತನಿಖೆಯಿಂದ ಇದು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಎನ್ನುವುದು ಸ್ಪಷ್ಟವಾಗಿದೆ.
ಮೃತಳ ಕೈ ಮೇಲೆ ಎರಡು ಟ್ಯಾಟೂಗಳು ಪತ್ತೆಯಾಗಿದ್ದು, ಗುರುತಿನ ಮಾಹಿತಿ ದೊರಕಲು ಸಹಾಯವಾಯಿತು. ಶವದ ಎಲ್ಲಾ ಭಾಗಗಳನ್ನು ಎಫ್ಎಸ್ಎಲ್ಗೆ ರವಾನಿಸಲಾಗಿದ್ದು, ಹೆಚ್ಚಿನ ವೈಜ್ಞಾನಿಕ ತನಿಖೆ ಮುಂದುವರಿದಿದೆ.
ಪೊಲೀಸ್ ಹೇಳಿಕೆ
“ಈ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ತುಮಕೂರು ಜಿಲ್ಲಾ ಎಸ್ಪಿ ಅಶೋಕ್ ವೆಂಕಟ್ ತಿಳಿಸಿದ್ದಾರೆ.
ಈ ಘಟನೆ ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ಕಾಲದಲ್ಲಿ ದಾಖಲಾಗಿರುವ ಅತ್ಯಂತ ಭೀಕರ ಹತ್ಯೆಯಾಗಿ ದಾಖಲಾಗಿದ್ದು, ಸ್ಥಳೀಯರಲ್ಲಿ ಭೀತಿ ಮತ್ತು ಆಕ್ರೋಶ ಉಂಟುಮಾಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…