ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಿದನಗೆರೆ ಬೈಪಾಸ್ ಬಳಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಟುಂಬದ ನಾಲ್ವರು ಸಾವಿಗೀಡಾದ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ನಟರಾಜ ಬಡಾವಣೆಯ ನಿವಾಸಿ ಹಾಗೂ ಭಾರತ್ ಕೋಪರೇಟಿವ್ ಬ್ಯಾಂಕ್ ನಿರ್ದೇಶಕ ಸೀಬೆಗೌಡ (45), ಅವರ ಪತ್ನಿ ಶೋಭಾ (36), ಹಾಗೂ ಮಕ್ಕಳಾದ ದುಂಬಿಶ್ರೀ ಮತ್ತು ಭಾನುಕಿರಣ್ ಗೌಡ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಸೀಬೆಗೌಡ ತಮ್ಮ ಮಗ ಭಾನುಕಿರಣ್ಗೌಡನನ್ನು ಕುಣಿಗಲ್ನ ವಾಲಿ ಇಂಟರ್ ನ್ಯಾಷನಲ್ ಶಾಲೆಗೆ ಸೇರಿಸಲು ತಮ್ಮ ಕುಟುಂಬದೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹಾಸನದಿಂದ ಬರುತ್ತಿದ್ದ ವೇಗದ ಕ್ಯಾಂಟರ್ ವಾಹನವೊಂದು ನಿಯಂತ್ರಣ ತಪ್ಪಿ ಅವರ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದು ಭೀಕರ ಅವಘಡ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸವಾರರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಕುಣಿಗಲ್ ಸರಕಾರಿ ಆಸ್ಪತ್ರೆಗೆ ಸಾಗಿಸಿದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಅಪಘಾತಕ್ಕೆ ಕಾರಣವಾಗಿರುವ ಕ್ಯಾಂಟರ್ ಚಾಲಕನ ಅಜಾಗರೂಕ ಚಾಲನೆ ಮತ್ತು ಸಾರಿಗೆ ನಿಯಮಗಳ ಉಲ್ಲಂಘನೆ ಪ್ರಮುಖ ಕಾರಣವೆನ್ನಲಾಗಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಅವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಈ ಅಪಘಾತದಿಂದ ಮಾಗಡಿಯ ಸೀಬೆಗೌಡ ಅವರ ಮನೆಮಾತಾದ ಕುಟುಂಬವೊಂದೇ ನಾಶವಾಗಿದ್ದು, ಸ್ಥಳೀಯರಲ್ಲಿ ಶೋಕದ ಛಾಯೆ ಮನೆಮಾಡಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…