ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಿದನಗೆರೆ ಬೈಪಾಸ್ ಬಳಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಟುಂಬದ ನಾಲ್ವರು ಸಾವಿಗೀಡಾದ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ನಟರಾಜ ಬಡಾವಣೆಯ ನಿವಾಸಿ ಹಾಗೂ ಭಾರತ್ ಕೋಪರೇಟಿವ್ ಬ್ಯಾಂಕ್ ನಿರ್ದೇಶಕ ಸೀಬೆಗೌಡ (45), ಅವರ ಪತ್ನಿ ಶೋಭಾ (36), ಹಾಗೂ ಮಕ್ಕಳಾದ ದುಂಬಿಶ್ರೀ ಮತ್ತು ಭಾನುಕಿರಣ್ ಗೌಡ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಸೀಬೆಗೌಡ ತಮ್ಮ ಮಗ ಭಾನುಕಿರಣ್ಗೌಡನನ್ನು ಕುಣಿಗಲ್ನ ವಾಲಿ ಇಂಟರ್ ನ್ಯಾಷನಲ್ ಶಾಲೆಗೆ ಸೇರಿಸಲು ತಮ್ಮ ಕುಟುಂಬದೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹಾಸನದಿಂದ ಬರುತ್ತಿದ್ದ ವೇಗದ ಕ್ಯಾಂಟರ್ ವಾಹನವೊಂದು ನಿಯಂತ್ರಣ ತಪ್ಪಿ ಅವರ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದು ಭೀಕರ ಅವಘಡ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸವಾರರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಕುಣಿಗಲ್ ಸರಕಾರಿ ಆಸ್ಪತ್ರೆಗೆ ಸಾಗಿಸಿದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಅಪಘಾತಕ್ಕೆ ಕಾರಣವಾಗಿರುವ ಕ್ಯಾಂಟರ್ ಚಾಲಕನ ಅಜಾಗರೂಕ ಚಾಲನೆ ಮತ್ತು ಸಾರಿಗೆ ನಿಯಮಗಳ ಉಲ್ಲಂಘನೆ ಪ್ರಮುಖ ಕಾರಣವೆನ್ನಲಾಗಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಅವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಈ ಅಪಘಾತದಿಂದ ಮಾಗಡಿಯ ಸೀಬೆಗೌಡ ಅವರ ಮನೆಮಾತಾದ ಕುಟುಂಬವೊಂದೇ ನಾಶವಾಗಿದ್ದು, ಸ್ಥಳೀಯರಲ್ಲಿ ಶೋಕದ ಛಾಯೆ ಮನೆಮಾಡಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…