Latest

ಮನೆಯೊಳಗೆ ನುಗ್ಗಿ ಬಂಗಾರ ಆಭರಣ ಕಳ್ಳತನ ಮಾಡಿದ್ದ ನಾಲ್ವರು ಪೊಲೀಸರ ಬಲೆಗೆ.

ಶಿರಸಿ;  ಮನೆಯೊಳಗಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಬಂಗಾರದ ಆಭರಣ ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಬನವಾಸಿ ಪೋಲಿಸರು ಬಂಧಿಸಿದ್ದಾರೆ.

ಶಿರಗೋಡದ ಮಹಮ್ಮದ್ ಕೈಫ್ ಮಹಮ್ಮದ್ ಗೌಸ್ (೧೯ ), ಬನವಾಸಿ ಯ ವಿಶ್ವ ಮಹೇಶ ಪಾವಸ್ಕರ, (೨೧), ಬನವಾಸಿ ಕಡಗೋಡದ,  ಯಾಸೀನ್ ಬಾಷಾಸಾಬ್ (೧೮) ಹಾಗೂ ಹೊಸಪೇಟೆ ರಸ್ತೆ ಬನವಾಸಿಯ, ರಿಯಾಜ್ ತಂದೆ ಇಕ್ಬಾಲ್ ಚೌಧರಿತ (೧೯) ಆರೋಪಿಗಳಾಗಿದ್ದಾರೆ. ಆರೋಪಿಗಳು ಸ.೭ರಂದು ಬನವಾಸಿ ಯ ಖಲೀಲ ಅಬ್ದುಲ್ ಅಜೀಂ ಶೇಖ್ ಎಂಬಾತರ ಮನೆಯ ಒಳಗಡೆ ನುಗ್ಗಿ ಸುಮಾರು ೨,೫೫,೦೦೦ ರೂ, ನಗದು ಹಣ ಹಾಗೂ ಸುಮಾರು ೪ ಗ್ರಾಂ ತೂಕದ ಬಂಗಾರದ ನಮೂನೆಯ ಸಣ್ಣ ಉಂಗುರುಗಳು ೪.೦೦೦=೦೦ ರೂ, ಬೆಲೆಯವುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು.ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಗಿಳಿದ ಪೋಲಿಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಮೊದಲನೇ ಆರೋಪಿಯಾದ ಮಹಮ್ಮದ್ ಕೈಫ್ ಮಹಮ್ಮದ್ ಗೌಸ್ ಈತನು ಪೆ.೧೬ರಂದು ಬನವಾಸಿ ಯ ಸುಮರ್ಣಾ ಮಾಲತೇಶ ಎಂಬಾತರ ಮನೆಯನ್ನು ಕಳ್ಳತನ ಮಾಡಿದ್ದನ್ನೂ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಪೋಲಿಸ್ ತನಿಖೆ ಯಿಂದ ಎರಡು ಪ್ರಕರಣಕ್ಕೆ ಸಂಬಂಧಿಸಿ ಒಟ್ಟು-೨,೭೫,೦೦೦ ನಗದು ಹಾಗೂ ೧೦ ಗ್ರಾಂ ಬಂಗಾರದ  ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆ ಯಲ್ಲಿ ಡಿವೈಎಸ್ಪಿ ರವಿನಾಯ್ಕ ಸಿಪಿಐ ರಾಮಚಂದ್ರ ನಾಯಕ್ ಮಾರ್ಗದರ್ಶನ ದಲ್ಲಿ ಬನವಾಸಿ ಠಾಣೆ ಪಿಎಸ್ಐ ಗಳಾದ ಹನುಮಂತ ಬೀರಾದಾರ, ಚಂದ್ರಕಲಾ ಪತ್ತಾರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago