ಶಿರಸಿ; ಮನೆಯೊಳಗಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಬಂಗಾರದ ಆಭರಣ ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಬನವಾಸಿ ಪೋಲಿಸರು ಬಂಧಿಸಿದ್ದಾರೆ.
ಶಿರಗೋಡದ ಮಹಮ್ಮದ್ ಕೈಫ್ ಮಹಮ್ಮದ್ ಗೌಸ್ (೧೯ ), ಬನವಾಸಿ ಯ ವಿಶ್ವ ಮಹೇಶ ಪಾವಸ್ಕರ, (೨೧), ಬನವಾಸಿ ಕಡಗೋಡದ, ಯಾಸೀನ್ ಬಾಷಾಸಾಬ್ (೧೮) ಹಾಗೂ ಹೊಸಪೇಟೆ ರಸ್ತೆ ಬನವಾಸಿಯ, ರಿಯಾಜ್ ತಂದೆ ಇಕ್ಬಾಲ್ ಚೌಧರಿತ (೧೯) ಆರೋಪಿಗಳಾಗಿದ್ದಾರೆ. ಆರೋಪಿಗಳು ಸ.೭ರಂದು ಬನವಾಸಿ ಯ ಖಲೀಲ ಅಬ್ದುಲ್ ಅಜೀಂ ಶೇಖ್ ಎಂಬಾತರ ಮನೆಯ ಒಳಗಡೆ ನುಗ್ಗಿ ಸುಮಾರು ೨,೫೫,೦೦೦ ರೂ, ನಗದು ಹಣ ಹಾಗೂ ಸುಮಾರು ೪ ಗ್ರಾಂ ತೂಕದ ಬಂಗಾರದ ನಮೂನೆಯ ಸಣ್ಣ ಉಂಗುರುಗಳು ೪.೦೦೦=೦೦ ರೂ, ಬೆಲೆಯವುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು.ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಗಿಳಿದ ಪೋಲಿಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಮೊದಲನೇ ಆರೋಪಿಯಾದ ಮಹಮ್ಮದ್ ಕೈಫ್ ಮಹಮ್ಮದ್ ಗೌಸ್ ಈತನು ಪೆ.೧೬ರಂದು ಬನವಾಸಿ ಯ ಸುಮರ್ಣಾ ಮಾಲತೇಶ ಎಂಬಾತರ ಮನೆಯನ್ನು ಕಳ್ಳತನ ಮಾಡಿದ್ದನ್ನೂ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.
ಪೋಲಿಸ್ ತನಿಖೆ ಯಿಂದ ಎರಡು ಪ್ರಕರಣಕ್ಕೆ ಸಂಬಂಧಿಸಿ ಒಟ್ಟು-೨,೭೫,೦೦೦ ನಗದು ಹಾಗೂ ೧೦ ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆ ಯಲ್ಲಿ ಡಿವೈಎಸ್ಪಿ ರವಿನಾಯ್ಕ ಸಿಪಿಐ ರಾಮಚಂದ್ರ ನಾಯಕ್ ಮಾರ್ಗದರ್ಶನ ದಲ್ಲಿ ಬನವಾಸಿ ಠಾಣೆ ಪಿಎಸ್ಐ ಗಳಾದ ಹನುಮಂತ ಬೀರಾದಾರ, ಚಂದ್ರಕಲಾ ಪತ್ತಾರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…