Latest

ಮನೆಯೊಳಗೆ ನುಗ್ಗಿ ಬಂಗಾರ ಆಭರಣ ಕಳ್ಳತನ ಮಾಡಿದ್ದ ನಾಲ್ವರು ಪೊಲೀಸರ ಬಲೆಗೆ.

ಶಿರಸಿ;  ಮನೆಯೊಳಗಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಬಂಗಾರದ ಆಭರಣ ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಬನವಾಸಿ ಪೋಲಿಸರು ಬಂಧಿಸಿದ್ದಾರೆ.

ಶಿರಗೋಡದ ಮಹಮ್ಮದ್ ಕೈಫ್ ಮಹಮ್ಮದ್ ಗೌಸ್ (೧೯ ), ಬನವಾಸಿ ಯ ವಿಶ್ವ ಮಹೇಶ ಪಾವಸ್ಕರ, (೨೧), ಬನವಾಸಿ ಕಡಗೋಡದ,  ಯಾಸೀನ್ ಬಾಷಾಸಾಬ್ (೧೮) ಹಾಗೂ ಹೊಸಪೇಟೆ ರಸ್ತೆ ಬನವಾಸಿಯ, ರಿಯಾಜ್ ತಂದೆ ಇಕ್ಬಾಲ್ ಚೌಧರಿತ (೧೯) ಆರೋಪಿಗಳಾಗಿದ್ದಾರೆ. ಆರೋಪಿಗಳು ಸ.೭ರಂದು ಬನವಾಸಿ ಯ ಖಲೀಲ ಅಬ್ದುಲ್ ಅಜೀಂ ಶೇಖ್ ಎಂಬಾತರ ಮನೆಯ ಒಳಗಡೆ ನುಗ್ಗಿ ಸುಮಾರು ೨,೫೫,೦೦೦ ರೂ, ನಗದು ಹಣ ಹಾಗೂ ಸುಮಾರು ೪ ಗ್ರಾಂ ತೂಕದ ಬಂಗಾರದ ನಮೂನೆಯ ಸಣ್ಣ ಉಂಗುರುಗಳು ೪.೦೦೦=೦೦ ರೂ, ಬೆಲೆಯವುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು.ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಗಿಳಿದ ಪೋಲಿಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಮೊದಲನೇ ಆರೋಪಿಯಾದ ಮಹಮ್ಮದ್ ಕೈಫ್ ಮಹಮ್ಮದ್ ಗೌಸ್ ಈತನು ಪೆ.೧೬ರಂದು ಬನವಾಸಿ ಯ ಸುಮರ್ಣಾ ಮಾಲತೇಶ ಎಂಬಾತರ ಮನೆಯನ್ನು ಕಳ್ಳತನ ಮಾಡಿದ್ದನ್ನೂ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಪೋಲಿಸ್ ತನಿಖೆ ಯಿಂದ ಎರಡು ಪ್ರಕರಣಕ್ಕೆ ಸಂಬಂಧಿಸಿ ಒಟ್ಟು-೨,೭೫,೦೦೦ ನಗದು ಹಾಗೂ ೧೦ ಗ್ರಾಂ ಬಂಗಾರದ  ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆ ಯಲ್ಲಿ ಡಿವೈಎಸ್ಪಿ ರವಿನಾಯ್ಕ ಸಿಪಿಐ ರಾಮಚಂದ್ರ ನಾಯಕ್ ಮಾರ್ಗದರ್ಶನ ದಲ್ಲಿ ಬನವಾಸಿ ಠಾಣೆ ಪಿಎಸ್ಐ ಗಳಾದ ಹನುಮಂತ ಬೀರಾದಾರ, ಚಂದ್ರಕಲಾ ಪತ್ತಾರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago