ಕಳೆದ 3-4 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಶಾಲಾ ಕಟ್ಟಡದ ಮೇಲ್ಛಾವಣಿಯ ಮೇಲ್ಪದರ ಕಳಚಿ ಬಿದ್ದ ಪರಿಣಾಮದಿಂದ ಅದೇ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ 4 ಜನ ವಿದ್ಯಾರ್ಥಿಗಳು ಗಾಯಗೊಂಡ ದುರ್ಘಟನೆ ಧಾರವಾಡ ತಾಲೂಕಿನ ಬೇಗೂರು ಎಂಬ ಗ್ರಾಮದಲ್ಲಿ ನಡೆದಿದೆ ಬೇಗೂರು ಎಂಬ ಗ್ರಾಮದ ಸರಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಅದೇ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗಳು ಗುರುಗಳು ಪಾಠ ಮಾಡುವುದನ್ನು ಕುಳಿತು ಕೇಳುತ್ತಿರುವಾಗ ಕಟ್ಟಡದ ಮೇಲ್ಪದರ ಕಿತ್ತುಕೊಂಡು ಬಿದ್ದಿದೆ ಇದರಿಂದ ಕೊಠಡಿಯಲ್ಲಿದ್ದ4 ಜನ ವಿದ್ಯಾರ್ಥಿಗಳ ಕೈ ಹಾಗೂ ತಲೆಯ ಭಾಗಕ್ಕೆ ಗಾಯಗಳಾಗಿದ್ದು ಗಾಯಗೊಂಡ ವಿದ್ಯರ್ಥಿಗಳನ್ನು ಗರಗ ಪ್ರಾಥಮಿಕ ಆರೋಗ್ಯ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿದೆ ಮತ್ತು ಈ ಶಾಲಾ ಕಟ್ಟಡ ತುಂಬಾ ಹಳೆಯದಾಗಿದ್ದು ನಿರಂತರವಾಗಿ ಮಳೆ ಸುರಿದಿದ್ದರಿಂದ ಶಾಲಾ ಕಟ್ಟಡದ ಮೇಲ್ಪದರ ಕಿತ್ತುಕೊಂಡು ಬಿದ್ದಿದೆ ಈ ಸರಕಾರಿ ಶಾಲೆಯಲ್ಲಿ 3 ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು ಯಾವ ಕ್ಷಣದಲ್ಲೂ ಬೇಕಾದರೂ ಅನಾಹುತ ಸಂಭವಿಸಬಹುದು ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಸಂಭಂದ ಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಗಳು ಹದಗೆಟ್ಟ ಶಾಲಾ ಕಟ್ಟಡವನ್ನು ವಿದ್ಯಾರ್ಥಿಗಳಿಗೋಸ್ಕರ ಸುರಕ್ಷಿತ ಶಾಲಾ ಕಟ್ಟಡವನ್ನಾಗಿ ನಿರ್ಮಿಸಿಕೊಡುತ್ತಾರಾ ಕಾದು ನೋಡಬೇಕಾಗಿದೆ.
ವರದಿ: ಶಿವು ಹುಬ್ಬಳ್ಳಿ .
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…