ಕಳೆದ 3-4 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಶಾಲಾ ಕಟ್ಟಡದ ಮೇಲ್ಛಾವಣಿಯ ಮೇಲ್ಪದರ ಕಳಚಿ ಬಿದ್ದ ಪರಿಣಾಮದಿಂದ ಅದೇ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ 4 ಜನ ವಿದ್ಯಾರ್ಥಿಗಳು ಗಾಯಗೊಂಡ ದುರ್ಘಟನೆ ಧಾರವಾಡ ತಾಲೂಕಿನ ಬೇಗೂರು ಎಂಬ ಗ್ರಾಮದಲ್ಲಿ ನಡೆದಿದೆ ಬೇಗೂರು ಎಂಬ ಗ್ರಾಮದ ಸರಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಅದೇ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗಳು ಗುರುಗಳು ಪಾಠ ಮಾಡುವುದನ್ನು ಕುಳಿತು ಕೇಳುತ್ತಿರುವಾಗ ಕಟ್ಟಡದ ಮೇಲ್ಪದರ ಕಿತ್ತುಕೊಂಡು ಬಿದ್ದಿದೆ ಇದರಿಂದ ಕೊಠಡಿಯಲ್ಲಿದ್ದ4 ಜನ ವಿದ್ಯಾರ್ಥಿಗಳ ಕೈ ಹಾಗೂ ತಲೆಯ ಭಾಗಕ್ಕೆ ಗಾಯಗಳಾಗಿದ್ದು ಗಾಯಗೊಂಡ ವಿದ್ಯರ್ಥಿಗಳನ್ನು ಗರಗ ಪ್ರಾಥಮಿಕ ಆರೋಗ್ಯ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿದೆ ಮತ್ತು ಈ ಶಾಲಾ ಕಟ್ಟಡ ತುಂಬಾ ಹಳೆಯದಾಗಿದ್ದು ನಿರಂತರವಾಗಿ ಮಳೆ ಸುರಿದಿದ್ದರಿಂದ ಶಾಲಾ ಕಟ್ಟಡದ ಮೇಲ್ಪದರ ಕಿತ್ತುಕೊಂಡು ಬಿದ್ದಿದೆ ಈ ಸರಕಾರಿ ಶಾಲೆಯಲ್ಲಿ 3 ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು ಯಾವ ಕ್ಷಣದಲ್ಲೂ ಬೇಕಾದರೂ ಅನಾಹುತ ಸಂಭವಿಸಬಹುದು ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಸಂಭಂದ ಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಗಳು ಹದಗೆಟ್ಟ ಶಾಲಾ ಕಟ್ಟಡವನ್ನು ವಿದ್ಯಾರ್ಥಿಗಳಿಗೋಸ್ಕರ ಸುರಕ್ಷಿತ ಶಾಲಾ ಕಟ್ಟಡವನ್ನಾಗಿ ನಿರ್ಮಿಸಿಕೊಡುತ್ತಾರಾ ಕಾದು ನೋಡಬೇಕಾಗಿದೆ.
ವರದಿ: ಶಿವು ಹುಬ್ಬಳ್ಳಿ .
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…