ಕಳೆದ 3-4 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಶಾಲಾ ಕಟ್ಟಡದ ಮೇಲ್ಛಾವಣಿಯ ಮೇಲ್ಪದರ ಕಳಚಿ ಬಿದ್ದ ಪರಿಣಾಮದಿಂದ ಅದೇ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ 4 ಜನ ವಿದ್ಯಾರ್ಥಿಗಳು ಗಾಯಗೊಂಡ ದುರ್ಘಟನೆ ಧಾರವಾಡ ತಾಲೂಕಿನ ಬೇಗೂರು ಎಂಬ ಗ್ರಾಮದಲ್ಲಿ ನಡೆದಿದೆ ಬೇಗೂರು ಎಂಬ ಗ್ರಾಮದ ಸರಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಅದೇ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗಳು ಗುರುಗಳು ಪಾಠ ಮಾಡುವುದನ್ನು ಕುಳಿತು ಕೇಳುತ್ತಿರುವಾಗ ಕಟ್ಟಡದ ಮೇಲ್ಪದರ ಕಿತ್ತುಕೊಂಡು ಬಿದ್ದಿದೆ ಇದರಿಂದ ಕೊಠಡಿಯಲ್ಲಿದ್ದ4 ಜನ ವಿದ್ಯಾರ್ಥಿಗಳ ಕೈ ಹಾಗೂ ತಲೆಯ ಭಾಗಕ್ಕೆ ಗಾಯಗಳಾಗಿದ್ದು ಗಾಯಗೊಂಡ ವಿದ್ಯರ್ಥಿಗಳನ್ನು ಗರಗ ಪ್ರಾಥಮಿಕ ಆರೋಗ್ಯ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿದೆ ಮತ್ತು ಈ ಶಾಲಾ ಕಟ್ಟಡ ತುಂಬಾ ಹಳೆಯದಾಗಿದ್ದು ನಿರಂತರವಾಗಿ ಮಳೆ ಸುರಿದಿದ್ದರಿಂದ ಶಾಲಾ ಕಟ್ಟಡದ ಮೇಲ್ಪದರ ಕಿತ್ತುಕೊಂಡು ಬಿದ್ದಿದೆ ಈ ಸರಕಾರಿ ಶಾಲೆಯಲ್ಲಿ 3 ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು ಯಾವ ಕ್ಷಣದಲ್ಲೂ ಬೇಕಾದರೂ ಅನಾಹುತ ಸಂಭವಿಸಬಹುದು ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಸಂಭಂದ ಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಗಳು ಹದಗೆಟ್ಟ ಶಾಲಾ ಕಟ್ಟಡವನ್ನು ವಿದ್ಯಾರ್ಥಿಗಳಿಗೋಸ್ಕರ ಸುರಕ್ಷಿತ ಶಾಲಾ ಕಟ್ಟಡವನ್ನಾಗಿ ನಿರ್ಮಿಸಿಕೊಡುತ್ತಾರಾ ಕಾದು ನೋಡಬೇಕಾಗಿದೆ.
ವರದಿ: ಶಿವು ಹುಬ್ಬಳ್ಳಿ .
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…