Latest

ಸೈಟು ಮತ್ತು ಜಮೀನುಗಳ ನಕಲಿ ದಾಖಲೆ ಸೃಷ್ಠಿಸಿ ಮೋಸ ಮಾಡುತ್ತಿದ್ದ ಮೂವರ ಬಂಧನ.

ಮೈಸೂರಿನ ಕುವೆಂಪುನಗರದ ಸರ್ವಿಸ್ ಅಪಾರ್ಟ್ಮೆಂಟ್‌ವೊಂದರಲ್ಲಿ ಮೂರು ಜನ ಆಸಾಮಿಗಳು ಸೈಟ್‌ಗಳು ಮತ್ತು ಜಮೀನುಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜನರನ್ನು ವಂಚಿಸಿ ಮೋಸದಿಂದ ಅಕ್ರಮ ಲಾಭ ಮಾಡಿ ಕೊಳ್ಳುತ್ತಿರುವುದಾಗಿ ಮೈಸೂರು ನಗರದ ಡಿ.ಸಿ.ಪಿ. ಕಾನೂನು ಮತ್ತು ಸುವ್ಯವಸ್ಥೆ ರವರಾದ ಶ್ರೀ ಪ್ರದೀಪ್ ಗುಂಟಿ, ಐಪಿಎಸ್ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ಈ ಆರೋಪಿಗಳ ಪತ್ತೆ ಸಂಬಂಧ ಡಿ.ಸಿ.ಪಿ.ರವರು ವಿಶೇಷ ತಂಡವನ್ನು ರಚನೆ ಮಾಡಿ ಮೈಸೂರುನಗರದ ಕುವೆಂಪುನಗರ ಪೊಲೀಸ್ ಠಾಣಾ ಸರಹದ್ದಿನ ರಾಮಕೃಷ್ಣನಗರ ಐ ಬ್ಲಾಕ್‌ನ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅರ್ಪಾಟ್‌ಮೆಂಟ್‌ನ ಮೂರನೇ ಮಹಡಿಯಲ್ಲಿರುವ ರೂಂ ನಂ: ೩೦೧ ಸ್ಥಳದ ಮೇಲೆ ದಿನಾಂಕ: ೦೫/೦೯/೨೦೨೨ ರಂದು ದಾಳಿ ಮಾಡಿ ಪರಿಶೀಲಿಸಿದ್ದು, ಮೂವರು ಆರೋಪಿಗಳು ಸೈಟ್‌ಗಳು ಮತ್ತು ಜಮೀನುಗಳ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿರುವ ಕೃತ್ಯದಲ್ಲಿ ತೊಡಗಿರುವುದು ಕಂಡು ಬಂದ ಮೇರೆಗೆ ಮೂರು ಜನ ಆರೋಪಿಗಳನ್ನು ಬಂಧಿಸಿ, ಅವರುಗಳು ನಕಲಿ ದಾಖಲಾತಿಗಳನ್ನು ಸೃಷ್ಟಿಸಲು ಬಳಸುತ್ತಿದ್ದ ಲ್ಯಾಪ್‌ಟಾಪ್, ಪ್ರಿಂಟರ್, ಸ್ಕಾö್ಯನರ್‌ಗಳು, ಮೊಬೈಲ್‌ಗಳು ಹಾಗೂ ವಿವಿಧ ಬ್ಯಾಂಕ್‌ಗಳು ಮತ್ತು ವಿವಿಧ ಇಲಾಖೆಗಳಿಗೆ ಸೇರಿದ ನಕಲಿ ಸೀಲ್‌ಗಳು, ಅಧಿಕಾರಿಗಳ ನಕಲಿ ಸೀಲ್‌ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈ ಸಂಬಂದ ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಳ್ಳಲಾಗಿದೆ.
ಈ ಪತ್ತೆ ಕಾರ್ಯವನ್ನು ಡಿ.ಸಿ.ಪಿ., ಕಾನೂನು ಮತ್ತು ಸುವ್ಯವಸ್ಥೆ ರವರಾದ ಶ್ರೀ ಪ್ರದೀಪ್ ಗುಂಟಿ, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಕೃಷ್ಣರಾಜ ವಿಭಾಗದ ಎ.ಸಿ.ಪಿ.ರವರಾದ ಶ್ರೀ ಗಂಗಾಧರಸ್ವಾಮಿ ಎಸ್.ಇ ರವರ ಉಸ್ತುವಾರಿಯಲ್ಲಿ, ಕುವೆಂಪುನಗರ ಪೊಲೀಸ್ ಠಾಣೆಯ ಪಿ.ಐ ರವರಾದ ಶ್ರೀ ಷಣ್ಮುಗ ವರ್ಮ ಕೆ, ಪಿಎಸ್‌ಐ ರವರಾದ ಕು.ರಾಧ ಎಂ, ಶ್ರೀ ಗೋಪಾಲ್, ಎಸ್ ಪಿ, ಪ್ರೊ.ಪಿಎಸ್‌ಐ ಶ್ರೀ ಪ್ರಭು ಹಾಗೂ ಎ.ಎಸ್.ಐಮುರಳೀಗೌಡ ಸಿಬ್ಬಂದಿಯವರಾದ ಪುರುಷೋತ್ತಮ್, ಕೃಷ್ಣ ಮಂಜುನಾಥ್ ಕೆ.ಎನ್., ರಾಜುಸಾಬ್, ಮೌನೇಶ, ಅಮೋಘ್, ಪುಟ್ಟಪ್ಪ ಎನ್‌ಕೆ, ಹಜರತ್ ಅಲಿ, ಮಹೇಶ್.ಎಂ, ಯೋಗೇಶ, ರವರು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

7 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

7 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

7 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

7 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

8 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago