Latest

ಸೈಟು ಮತ್ತು ಜಮೀನುಗಳ ನಕಲಿ ದಾಖಲೆ ಸೃಷ್ಠಿಸಿ ಮೋಸ ಮಾಡುತ್ತಿದ್ದ ಮೂವರ ಬಂಧನ.

ಮೈಸೂರಿನ ಕುವೆಂಪುನಗರದ ಸರ್ವಿಸ್ ಅಪಾರ್ಟ್ಮೆಂಟ್‌ವೊಂದರಲ್ಲಿ ಮೂರು ಜನ ಆಸಾಮಿಗಳು ಸೈಟ್‌ಗಳು ಮತ್ತು ಜಮೀನುಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜನರನ್ನು ವಂಚಿಸಿ ಮೋಸದಿಂದ ಅಕ್ರಮ ಲಾಭ ಮಾಡಿ ಕೊಳ್ಳುತ್ತಿರುವುದಾಗಿ ಮೈಸೂರು ನಗರದ ಡಿ.ಸಿ.ಪಿ. ಕಾನೂನು ಮತ್ತು ಸುವ್ಯವಸ್ಥೆ ರವರಾದ ಶ್ರೀ ಪ್ರದೀಪ್ ಗುಂಟಿ, ಐಪಿಎಸ್ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ಈ ಆರೋಪಿಗಳ ಪತ್ತೆ ಸಂಬಂಧ ಡಿ.ಸಿ.ಪಿ.ರವರು ವಿಶೇಷ ತಂಡವನ್ನು ರಚನೆ ಮಾಡಿ ಮೈಸೂರುನಗರದ ಕುವೆಂಪುನಗರ ಪೊಲೀಸ್ ಠಾಣಾ ಸರಹದ್ದಿನ ರಾಮಕೃಷ್ಣನಗರ ಐ ಬ್ಲಾಕ್‌ನ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅರ್ಪಾಟ್‌ಮೆಂಟ್‌ನ ಮೂರನೇ ಮಹಡಿಯಲ್ಲಿರುವ ರೂಂ ನಂ: ೩೦೧ ಸ್ಥಳದ ಮೇಲೆ ದಿನಾಂಕ: ೦೫/೦೯/೨೦೨೨ ರಂದು ದಾಳಿ ಮಾಡಿ ಪರಿಶೀಲಿಸಿದ್ದು, ಮೂವರು ಆರೋಪಿಗಳು ಸೈಟ್‌ಗಳು ಮತ್ತು ಜಮೀನುಗಳ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿರುವ ಕೃತ್ಯದಲ್ಲಿ ತೊಡಗಿರುವುದು ಕಂಡು ಬಂದ ಮೇರೆಗೆ ಮೂರು ಜನ ಆರೋಪಿಗಳನ್ನು ಬಂಧಿಸಿ, ಅವರುಗಳು ನಕಲಿ ದಾಖಲಾತಿಗಳನ್ನು ಸೃಷ್ಟಿಸಲು ಬಳಸುತ್ತಿದ್ದ ಲ್ಯಾಪ್‌ಟಾಪ್, ಪ್ರಿಂಟರ್, ಸ್ಕಾö್ಯನರ್‌ಗಳು, ಮೊಬೈಲ್‌ಗಳು ಹಾಗೂ ವಿವಿಧ ಬ್ಯಾಂಕ್‌ಗಳು ಮತ್ತು ವಿವಿಧ ಇಲಾಖೆಗಳಿಗೆ ಸೇರಿದ ನಕಲಿ ಸೀಲ್‌ಗಳು, ಅಧಿಕಾರಿಗಳ ನಕಲಿ ಸೀಲ್‌ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈ ಸಂಬಂದ ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಳ್ಳಲಾಗಿದೆ.
ಈ ಪತ್ತೆ ಕಾರ್ಯವನ್ನು ಡಿ.ಸಿ.ಪಿ., ಕಾನೂನು ಮತ್ತು ಸುವ್ಯವಸ್ಥೆ ರವರಾದ ಶ್ರೀ ಪ್ರದೀಪ್ ಗುಂಟಿ, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಕೃಷ್ಣರಾಜ ವಿಭಾಗದ ಎ.ಸಿ.ಪಿ.ರವರಾದ ಶ್ರೀ ಗಂಗಾಧರಸ್ವಾಮಿ ಎಸ್.ಇ ರವರ ಉಸ್ತುವಾರಿಯಲ್ಲಿ, ಕುವೆಂಪುನಗರ ಪೊಲೀಸ್ ಠಾಣೆಯ ಪಿ.ಐ ರವರಾದ ಶ್ರೀ ಷಣ್ಮುಗ ವರ್ಮ ಕೆ, ಪಿಎಸ್‌ಐ ರವರಾದ ಕು.ರಾಧ ಎಂ, ಶ್ರೀ ಗೋಪಾಲ್, ಎಸ್ ಪಿ, ಪ್ರೊ.ಪಿಎಸ್‌ಐ ಶ್ರೀ ಪ್ರಭು ಹಾಗೂ ಎ.ಎಸ್.ಐಮುರಳೀಗೌಡ ಸಿಬ್ಬಂದಿಯವರಾದ ಪುರುಷೋತ್ತಮ್, ಕೃಷ್ಣ ಮಂಜುನಾಥ್ ಕೆ.ಎನ್., ರಾಜುಸಾಬ್, ಮೌನೇಶ, ಅಮೋಘ್, ಪುಟ್ಟಪ್ಪ ಎನ್‌ಕೆ, ಹಜರತ್ ಅಲಿ, ಮಹೇಶ್.ಎಂ, ಯೋಗೇಶ, ರವರು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

18 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

22 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

22 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

22 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

22 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

22 hours ago