Latest

ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರಿನಲ್ಲಿ ವಂಚನೆ: ಸಿಡಿಆರ್‌ ಡೇಟಾ ಮಾರಾಟ ಮಾಡುತ್ತಿದ್ದ ಐಶ್ವರ್ಯಗೌಡ ಸೇರಿದಂತೆ ಇಬ್ಬರು ಬಂಧನ

ಮಾಜಿ ಸಂಸದ ಡಿ.ಕೆ. ಸುರೇಶ್‌ ಹೆಸರು ಬಳಸಿ ಜ್ಯುವೆಲ್ಲರಿ ಶಾಪ್ ಮಾಲಕರು ಹಾಗೂ ಉದ್ಯಮಿಗಳನ್ನು ವಂಚಿಸಿದ್ದ ಐಶ್ವರ್ಯಗೌಡ ಪ್ರಕರಣದಲ್ಲಿ ಹೊಸ ಸಂಗತಿ ಬೆಳಕಿಗೆ ಬಂದಿದೆ. ಮೊಬೈಲ್‌ ಕರೆ ವಿವರ (CDR) ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪಶ್ಚಿಮ ವಿಭಾಗದ ಪೊಲೀಸರು ಅಕ್ಕೂರು ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸುನೀಲ್ (36) ಹಾಗೂ ಐಶ್ವರ್ಯಗೌಡನ ಆಪ್ತ ಪವನ್ (34) ಅವರನ್ನು ಬಂಧಿಸಿದ್ದಾರೆ.

ಸಿಡಿಆರ್‌ ಡೇಟಾ ಲೀಕ್‌: ಪೊಲೀಸರು ಕೈಗೆತ್ತಿಕೊಂಡ ಕಾನೂನು ಕ್ರಮ

  • ಐಶ್ವರ್ಯಗೌಡ ಸುಮಾರು 6-7 ಜನರ ಮೊಬೈಲ್‌ ಸಿಡಿಆರ್‌ ಡೇಟಾ ಸಂಗ್ರಹಿಸಿದ್ದಾಳೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.
  • ಹೆಚ್ಚಿನ ಮಾಹಿತಿ ಪಡೆಯಲು ಇಬ್ಬರನ್ನೂ 6 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
  • ಈ ಹಿಂದೆ ಐಶ್ವರ್ಯಗೌಡ, ಆಕೆಯ ಪತಿ ಹಾಗೂ ಇತರರ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
  • ಆ ತನಿಖೆ ವೇಳೆ ಪೊಲೀಸರು ಐಶ್ವರ್ಯಗೌಡನ ಐಫೋನ್ ಪರಿಶೀಲಿಸಿದಾಗ, ನಾಲ್ಕು ಜನರ CDR ಡೇಟಾ ಇದ್ದು, ಇದು ಹೆಡ್‌ ಕಾನ್‌ಸ್ಟೇಬಲ್‌ ಸುನೀಲ್ ಮೂಲಕ ಲಭ್ಯವಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಯಿತು.

ಪ್ರತಿ ಸಿಡಿಆರ್‌ಗೆ ₹40,000 ಸಂಗ್ರಹ!

  • ಐಶ್ವರ್ಯಗೌಡನ ಆಪ್ತ ಪವನ್‌ ಮತ್ತು ಹೆಡ್‌ಕಾನ್‌ಸ್ಟೇಬಲ್‌ ಸುನೀಲ್‌ ಒಟ್ಟಿಗೆ ಸಿಡಿಆರ್‌ ಡೇಟಾ ಮಾರಾಟ ಮಾಡುತ್ತಿದ್ದರು.
  • ಸ್ತ್ರೀರೋಗ ತಜ್ಞೆ ಮಂಜುಳಾ ಪಾಟೀಲ್, ನಂದಿನಿ ಪುಟ್ಟೇಗೌಡ, ಖುಷ್ಮಿತಾ ಹಾಗೂ ರೀ ಎಂಬವರ CDR ಡೇಟಾ 2021ರಿಂದ 2024ರ ವರೆಗೆ ಸುನೀಲ್ ನೀಡಿದ್ದಾನೆ.
  • ಪ್ರತಿ ಸಿಡಿಆರ್‌ಗೆ ಕನಿಷ್ಠ ₹30,000 – ₹40,000 ವಸೂಲಿ ಮಾಡಲಾಗುತ್ತಿತ್ತು.

ಇಬ್ಬರ ವಿಚಾರಣೆ ಮುಂದುವರಿದಿದ್ದು, ಸಿಡಿಆರ್‌ ಡೇಟಾ ದುರುಪಯೋಗ ಮಾಡಿದ್ದ ಮತ್ತಷ್ಟು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

9 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

9 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago