Latest

ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರಿನಲ್ಲಿ ವಂಚನೆ: ಸಿಡಿಆರ್‌ ಡೇಟಾ ಮಾರಾಟ ಮಾಡುತ್ತಿದ್ದ ಐಶ್ವರ್ಯಗೌಡ ಸೇರಿದಂತೆ ಇಬ್ಬರು ಬಂಧನ

ಮಾಜಿ ಸಂಸದ ಡಿ.ಕೆ. ಸುರೇಶ್‌ ಹೆಸರು ಬಳಸಿ ಜ್ಯುವೆಲ್ಲರಿ ಶಾಪ್ ಮಾಲಕರು ಹಾಗೂ ಉದ್ಯಮಿಗಳನ್ನು ವಂಚಿಸಿದ್ದ ಐಶ್ವರ್ಯಗೌಡ ಪ್ರಕರಣದಲ್ಲಿ ಹೊಸ ಸಂಗತಿ ಬೆಳಕಿಗೆ ಬಂದಿದೆ. ಮೊಬೈಲ್‌ ಕರೆ ವಿವರ (CDR) ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪಶ್ಚಿಮ ವಿಭಾಗದ ಪೊಲೀಸರು ಅಕ್ಕೂರು ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸುನೀಲ್ (36) ಹಾಗೂ ಐಶ್ವರ್ಯಗೌಡನ ಆಪ್ತ ಪವನ್ (34) ಅವರನ್ನು ಬಂಧಿಸಿದ್ದಾರೆ.

ಸಿಡಿಆರ್‌ ಡೇಟಾ ಲೀಕ್‌: ಪೊಲೀಸರು ಕೈಗೆತ್ತಿಕೊಂಡ ಕಾನೂನು ಕ್ರಮ

  • ಐಶ್ವರ್ಯಗೌಡ ಸುಮಾರು 6-7 ಜನರ ಮೊಬೈಲ್‌ ಸಿಡಿಆರ್‌ ಡೇಟಾ ಸಂಗ್ರಹಿಸಿದ್ದಾಳೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.
  • ಹೆಚ್ಚಿನ ಮಾಹಿತಿ ಪಡೆಯಲು ಇಬ್ಬರನ್ನೂ 6 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
  • ಈ ಹಿಂದೆ ಐಶ್ವರ್ಯಗೌಡ, ಆಕೆಯ ಪತಿ ಹಾಗೂ ಇತರರ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
  • ಆ ತನಿಖೆ ವೇಳೆ ಪೊಲೀಸರು ಐಶ್ವರ್ಯಗೌಡನ ಐಫೋನ್ ಪರಿಶೀಲಿಸಿದಾಗ, ನಾಲ್ಕು ಜನರ CDR ಡೇಟಾ ಇದ್ದು, ಇದು ಹೆಡ್‌ ಕಾನ್‌ಸ್ಟೇಬಲ್‌ ಸುನೀಲ್ ಮೂಲಕ ಲಭ್ಯವಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಯಿತು.

ಪ್ರತಿ ಸಿಡಿಆರ್‌ಗೆ ₹40,000 ಸಂಗ್ರಹ!

  • ಐಶ್ವರ್ಯಗೌಡನ ಆಪ್ತ ಪವನ್‌ ಮತ್ತು ಹೆಡ್‌ಕಾನ್‌ಸ್ಟೇಬಲ್‌ ಸುನೀಲ್‌ ಒಟ್ಟಿಗೆ ಸಿಡಿಆರ್‌ ಡೇಟಾ ಮಾರಾಟ ಮಾಡುತ್ತಿದ್ದರು.
  • ಸ್ತ್ರೀರೋಗ ತಜ್ಞೆ ಮಂಜುಳಾ ಪಾಟೀಲ್, ನಂದಿನಿ ಪುಟ್ಟೇಗೌಡ, ಖುಷ್ಮಿತಾ ಹಾಗೂ ರೀ ಎಂಬವರ CDR ಡೇಟಾ 2021ರಿಂದ 2024ರ ವರೆಗೆ ಸುನೀಲ್ ನೀಡಿದ್ದಾನೆ.
  • ಪ್ರತಿ ಸಿಡಿಆರ್‌ಗೆ ಕನಿಷ್ಠ ₹30,000 – ₹40,000 ವಸೂಲಿ ಮಾಡಲಾಗುತ್ತಿತ್ತು.

ಇಬ್ಬರ ವಿಚಾರಣೆ ಮುಂದುವರಿದಿದ್ದು, ಸಿಡಿಆರ್‌ ಡೇಟಾ ದುರುಪಯೋಗ ಮಾಡಿದ್ದ ಮತ್ತಷ್ಟು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

56 minutes ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

57 minutes ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

58 minutes ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

59 minutes ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

16 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

16 hours ago