Latest

ಪ್ರೇಮ ಮತ್ತು ಮದುವೆಯ ಹೆಸರಿನಲ್ಲಿ ವಂಚನೆ – ಮಹಿಳೆ ವಿರುದ್ಧ ಪ್ರಕರಣ ದಾಖಲು

ತುಮಕೂರು: ಪ್ರೀತಿ, ಪ್ರೇಮ, ಹಾಗೂ ಮದುವೆ ಹೆಸರಿನಲ್ಲಿ ಪುರುಷರನ್ನು ವಂಚಿಸುತ್ತಿದ್ದ ಫಾರ್ಹಾ ಖಾನಂ (29) ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣದ ದುರೋಪಯೋಗ

ಫಾರ್ಹಾ ಖಾನಂ ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸುತ್ತಿದ್ದಳು. ಸ್ನೇಹ ಒಡಂಬಡಿಕೆಯಾಗುತ್ತಿದ್ದಂತೆ, ಅವರನ್ನು ನಂಬಿಸಲು ಪ್ರೀತಿಯ ನಾಟಕವಾಡುತ್ತಿದ್ದಳು. ಬಳಿಕ ಹನಿಟ್ರ್ಯಾಪ್ ರಚಿಸಿ ಹಣ ಹಾಗೂ ಆಭರಣ ವಂಚಿಸುತ್ತಿದ್ದಾಳೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾಳೆ.

ಇದ್ರೀಸ್ ಮತ್ತು ಫಾರ್ಹಾ ಖಾನಂ ವಿವಾಹ

2014ರಲ್ಲಿ ತುಮಕೂರಿನ ಇದ್ರೀಸ್ ಎಂಬುವವರು ಫಾರ್ಹಾ ಖಾನಂನನ್ನು ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದರು. ಇದ್ರೀಸ್‌ಗೆ ಈ ಮದುವೆ ಎರಡನೇದು; ಮೊದಲ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣದಿಂದಾಗಿ ಅವರು ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಮದುವೆಯ ಎಲ್ಲಾ ಖರ್ಚನ್ನು ಇದ್ರೀಸ್ ನೋಡಿಕೊಂಡಿದ್ದರೂ, ಕೇವಲ 27 ದಿನಗಳ ಸಂಸಾರದ ಬಳಿಕ, ಫಾರ್ಹಾ ಖಾನಂ ವರಸೆ ಬದಲಿಸಿ ವಂಚನಾ ಆಟವಾಡಿದಳು.

ಹಳೆಯ ಸಂಬಂಧ ಹಾಗೂ ವಂಚನೆ

ಇದ್ರೀಸ್‌ಗಿಂತ ಮುಂಚೆಯೇ ಫಾರ್ಹಾ ಖಾನಂ ಜಾಕೀರ್ ಎಂಬುವವರನ್ನು ಮದುವೆಯಾಗಿದ್ದಳು. ಆದರೆ, ಇದನ್ನು ಈತನಿಗೆ ತಿಳಿಸದೆ, ತಾನೊಬ್ಬ ದಿವ್ಯಾಂಗ ಮಹಿಳೆ ಎಂದು ನಂಬಿಸಿದ್ದಳು. ಮದುವೆಯ ನಂತರವೂ, ಫಾರ್ಹಾ ಖಾನಂ ತನ್ನ ಮೊದಲ ಪತಿಯೊಂದಿಗೆ ಗುಪ್ತವಾಗಿ ಸಂಪರ್ಕದಲ್ಲಿದ್ದಳು. ಇದನ್ನು ಕಂಡು ಇದ್ರೀಸ್ ಪ್ರಶ್ನೆ ಮಾಡುತ್ತಿದ್ದಂತೆ, ಗಲಾಟೆ ಮಾಡಿ ಅವನನ್ನು ಮನೆಯಿಂದಲೇ ಹೊರಹಾಕಿದಳು.

ಪೊಲೀಸರ ಮೇಲೆ ಅನ್ಯಾಯದ ಆರೋಪ

ಇದ್ರೀಸ್ ತಮ್ಮ ಹಕ್ಕುಗಳಿಗಾಗಿ ಪೊಲೀಸರಿಗೆ ದೂರು ನೀಡಿದರೂ, ಸರಿಯಾದ ತನಿಖೆ ನಡೆಸದೇ, ಫಾರ್ಹಾ ಖಾನಂ ಪರ ವಲಿದು ವರದಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದ್ರೀಸ್ ತಾನು ಮದುವೆ ಸಂದರ್ಭದಲ್ಲಿ ನೀಡಿದ ಹಣ ಮತ್ತು ಚಿನ್ನಾಭರಣವನ್ನು ವಾಪಸ್ ನೀಡುವಂತೆ ಒತ್ತಾಯಿಸಿದ್ದರೂ, ಇದಕ್ಕೆ ಪ್ರತಿಯಾಗಿ ಫಾರ್ಹಾ ಖಾನಂ ಗೂಂಡಾಗಳನ್ನು ಕಳುಹಿಸಿ ಅವರ ಮೇಲೆ ಹಲ್ಲೆ ಮಾಡಿಸಿದ್ದಾಳೆ.

ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ

ಪೊಲೀಸರ ನಿರ್ಲಕ್ಷ್ಯದಿಂದ ನ್ಯಾಯ ದೊರಕದೆ ಇರುವುದರಿಂದ, ಇದ್ರೀಸ್ ಇದೀಗ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ಲದೇ, ಫಾರ್ಹಾ ಖಾನಂ ಇನ್ನೂ ಹಲವಾರು ಪುರುಷರೊಂದಿಗೆ ಲವ್ವಿಡವ್ವಿ ನಡೆಸುತ್ತಿದ್ದು, ಪ್ರೀತಿಯ ಹೆಸರಿನಲ್ಲಿ ವಂಚಿಸುವ ಮಾದರಿ ಮುಂದುವರಿಸುತ್ತಿದ್ದಾಳೆ ಎಂಬ ಆರೋಪಗಳು ಮುಂದುವರಿದಿವೆ.

ಈ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕೆಂದು ಇದ್ರೀಸ್ ಹಾಗೂ ಅವರ ಪರ ವಕೀಲರು ಆಗ್ರಹಿಸಿದ್ದಾರೆ.

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

11 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

11 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

11 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago