ತುಮಕೂರು: ಪ್ರೀತಿ, ಪ್ರೇಮ, ಹಾಗೂ ಮದುವೆ ಹೆಸರಿನಲ್ಲಿ ಪುರುಷರನ್ನು ವಂಚಿಸುತ್ತಿದ್ದ ಫಾರ್ಹಾ ಖಾನಂ (29) ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣದ ದುರೋಪಯೋಗ
ಫಾರ್ಹಾ ಖಾನಂ ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸುತ್ತಿದ್ದಳು. ಸ್ನೇಹ ಒಡಂಬಡಿಕೆಯಾಗುತ್ತಿದ್ದಂತೆ, ಅವರನ್ನು ನಂಬಿಸಲು ಪ್ರೀತಿಯ ನಾಟಕವಾಡುತ್ತಿದ್ದಳು. ಬಳಿಕ ಹನಿಟ್ರ್ಯಾಪ್ ರಚಿಸಿ ಹಣ ಹಾಗೂ ಆಭರಣ ವಂಚಿಸುತ್ತಿದ್ದಾಳೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾಳೆ.
ಇದ್ರೀಸ್ ಮತ್ತು ಫಾರ್ಹಾ ಖಾನಂ ವಿವಾಹ
2014ರಲ್ಲಿ ತುಮಕೂರಿನ ಇದ್ರೀಸ್ ಎಂಬುವವರು ಫಾರ್ಹಾ ಖಾನಂನನ್ನು ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದರು. ಇದ್ರೀಸ್ಗೆ ಈ ಮದುವೆ ಎರಡನೇದು; ಮೊದಲ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣದಿಂದಾಗಿ ಅವರು ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಮದುವೆಯ ಎಲ್ಲಾ ಖರ್ಚನ್ನು ಇದ್ರೀಸ್ ನೋಡಿಕೊಂಡಿದ್ದರೂ, ಕೇವಲ 27 ದಿನಗಳ ಸಂಸಾರದ ಬಳಿಕ, ಫಾರ್ಹಾ ಖಾನಂ ವರಸೆ ಬದಲಿಸಿ ವಂಚನಾ ಆಟವಾಡಿದಳು.
ಹಳೆಯ ಸಂಬಂಧ ಹಾಗೂ ವಂಚನೆ
ಇದ್ರೀಸ್ಗಿಂತ ಮುಂಚೆಯೇ ಫಾರ್ಹಾ ಖಾನಂ ಜಾಕೀರ್ ಎಂಬುವವರನ್ನು ಮದುವೆಯಾಗಿದ್ದಳು. ಆದರೆ, ಇದನ್ನು ಈತನಿಗೆ ತಿಳಿಸದೆ, ತಾನೊಬ್ಬ ದಿವ್ಯಾಂಗ ಮಹಿಳೆ ಎಂದು ನಂಬಿಸಿದ್ದಳು. ಮದುವೆಯ ನಂತರವೂ, ಫಾರ್ಹಾ ಖಾನಂ ತನ್ನ ಮೊದಲ ಪತಿಯೊಂದಿಗೆ ಗುಪ್ತವಾಗಿ ಸಂಪರ್ಕದಲ್ಲಿದ್ದಳು. ಇದನ್ನು ಕಂಡು ಇದ್ರೀಸ್ ಪ್ರಶ್ನೆ ಮಾಡುತ್ತಿದ್ದಂತೆ, ಗಲಾಟೆ ಮಾಡಿ ಅವನನ್ನು ಮನೆಯಿಂದಲೇ ಹೊರಹಾಕಿದಳು.
ಪೊಲೀಸರ ಮೇಲೆ ಅನ್ಯಾಯದ ಆರೋಪ
ಇದ್ರೀಸ್ ತಮ್ಮ ಹಕ್ಕುಗಳಿಗಾಗಿ ಪೊಲೀಸರಿಗೆ ದೂರು ನೀಡಿದರೂ, ಸರಿಯಾದ ತನಿಖೆ ನಡೆಸದೇ, ಫಾರ್ಹಾ ಖಾನಂ ಪರ ವಲಿದು ವರದಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದ್ರೀಸ್ ತಾನು ಮದುವೆ ಸಂದರ್ಭದಲ್ಲಿ ನೀಡಿದ ಹಣ ಮತ್ತು ಚಿನ್ನಾಭರಣವನ್ನು ವಾಪಸ್ ನೀಡುವಂತೆ ಒತ್ತಾಯಿಸಿದ್ದರೂ, ಇದಕ್ಕೆ ಪ್ರತಿಯಾಗಿ ಫಾರ್ಹಾ ಖಾನಂ ಗೂಂಡಾಗಳನ್ನು ಕಳುಹಿಸಿ ಅವರ ಮೇಲೆ ಹಲ್ಲೆ ಮಾಡಿಸಿದ್ದಾಳೆ.
ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ
ಪೊಲೀಸರ ನಿರ್ಲಕ್ಷ್ಯದಿಂದ ನ್ಯಾಯ ದೊರಕದೆ ಇರುವುದರಿಂದ, ಇದ್ರೀಸ್ ಇದೀಗ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ಲದೇ, ಫಾರ್ಹಾ ಖಾನಂ ಇನ್ನೂ ಹಲವಾರು ಪುರುಷರೊಂದಿಗೆ ಲವ್ವಿಡವ್ವಿ ನಡೆಸುತ್ತಿದ್ದು, ಪ್ರೀತಿಯ ಹೆಸರಿನಲ್ಲಿ ವಂಚಿಸುವ ಮಾದರಿ ಮುಂದುವರಿಸುತ್ತಿದ್ದಾಳೆ ಎಂಬ ಆರೋಪಗಳು ಮುಂದುವರಿದಿವೆ.
ಈ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕೆಂದು ಇದ್ರೀಸ್ ಹಾಗೂ ಅವರ ಪರ ವಕೀಲರು ಆಗ್ರಹಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…