Latest

ಪ್ರೇಮ ಮತ್ತು ಮದುವೆಯ ಹೆಸರಿನಲ್ಲಿ ವಂಚನೆ – ಮಹಿಳೆ ವಿರುದ್ಧ ಪ್ರಕರಣ ದಾಖಲು

ತುಮಕೂರು: ಪ್ರೀತಿ, ಪ್ರೇಮ, ಹಾಗೂ ಮದುವೆ ಹೆಸರಿನಲ್ಲಿ ಪುರುಷರನ್ನು ವಂಚಿಸುತ್ತಿದ್ದ ಫಾರ್ಹಾ ಖಾನಂ (29) ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣದ ದುರೋಪಯೋಗ

ಫಾರ್ಹಾ ಖಾನಂ ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸುತ್ತಿದ್ದಳು. ಸ್ನೇಹ ಒಡಂಬಡಿಕೆಯಾಗುತ್ತಿದ್ದಂತೆ, ಅವರನ್ನು ನಂಬಿಸಲು ಪ್ರೀತಿಯ ನಾಟಕವಾಡುತ್ತಿದ್ದಳು. ಬಳಿಕ ಹನಿಟ್ರ್ಯಾಪ್ ರಚಿಸಿ ಹಣ ಹಾಗೂ ಆಭರಣ ವಂಚಿಸುತ್ತಿದ್ದಾಳೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾಳೆ.

ಇದ್ರೀಸ್ ಮತ್ತು ಫಾರ್ಹಾ ಖಾನಂ ವಿವಾಹ

2014ರಲ್ಲಿ ತುಮಕೂರಿನ ಇದ್ರೀಸ್ ಎಂಬುವವರು ಫಾರ್ಹಾ ಖಾನಂನನ್ನು ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದರು. ಇದ್ರೀಸ್‌ಗೆ ಈ ಮದುವೆ ಎರಡನೇದು; ಮೊದಲ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣದಿಂದಾಗಿ ಅವರು ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಮದುವೆಯ ಎಲ್ಲಾ ಖರ್ಚನ್ನು ಇದ್ರೀಸ್ ನೋಡಿಕೊಂಡಿದ್ದರೂ, ಕೇವಲ 27 ದಿನಗಳ ಸಂಸಾರದ ಬಳಿಕ, ಫಾರ್ಹಾ ಖಾನಂ ವರಸೆ ಬದಲಿಸಿ ವಂಚನಾ ಆಟವಾಡಿದಳು.

ಹಳೆಯ ಸಂಬಂಧ ಹಾಗೂ ವಂಚನೆ

ಇದ್ರೀಸ್‌ಗಿಂತ ಮುಂಚೆಯೇ ಫಾರ್ಹಾ ಖಾನಂ ಜಾಕೀರ್ ಎಂಬುವವರನ್ನು ಮದುವೆಯಾಗಿದ್ದಳು. ಆದರೆ, ಇದನ್ನು ಈತನಿಗೆ ತಿಳಿಸದೆ, ತಾನೊಬ್ಬ ದಿವ್ಯಾಂಗ ಮಹಿಳೆ ಎಂದು ನಂಬಿಸಿದ್ದಳು. ಮದುವೆಯ ನಂತರವೂ, ಫಾರ್ಹಾ ಖಾನಂ ತನ್ನ ಮೊದಲ ಪತಿಯೊಂದಿಗೆ ಗುಪ್ತವಾಗಿ ಸಂಪರ್ಕದಲ್ಲಿದ್ದಳು. ಇದನ್ನು ಕಂಡು ಇದ್ರೀಸ್ ಪ್ರಶ್ನೆ ಮಾಡುತ್ತಿದ್ದಂತೆ, ಗಲಾಟೆ ಮಾಡಿ ಅವನನ್ನು ಮನೆಯಿಂದಲೇ ಹೊರಹಾಕಿದಳು.

ಪೊಲೀಸರ ಮೇಲೆ ಅನ್ಯಾಯದ ಆರೋಪ

ಇದ್ರೀಸ್ ತಮ್ಮ ಹಕ್ಕುಗಳಿಗಾಗಿ ಪೊಲೀಸರಿಗೆ ದೂರು ನೀಡಿದರೂ, ಸರಿಯಾದ ತನಿಖೆ ನಡೆಸದೇ, ಫಾರ್ಹಾ ಖಾನಂ ಪರ ವಲಿದು ವರದಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದ್ರೀಸ್ ತಾನು ಮದುವೆ ಸಂದರ್ಭದಲ್ಲಿ ನೀಡಿದ ಹಣ ಮತ್ತು ಚಿನ್ನಾಭರಣವನ್ನು ವಾಪಸ್ ನೀಡುವಂತೆ ಒತ್ತಾಯಿಸಿದ್ದರೂ, ಇದಕ್ಕೆ ಪ್ರತಿಯಾಗಿ ಫಾರ್ಹಾ ಖಾನಂ ಗೂಂಡಾಗಳನ್ನು ಕಳುಹಿಸಿ ಅವರ ಮೇಲೆ ಹಲ್ಲೆ ಮಾಡಿಸಿದ್ದಾಳೆ.

ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ

ಪೊಲೀಸರ ನಿರ್ಲಕ್ಷ್ಯದಿಂದ ನ್ಯಾಯ ದೊರಕದೆ ಇರುವುದರಿಂದ, ಇದ್ರೀಸ್ ಇದೀಗ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ಲದೇ, ಫಾರ್ಹಾ ಖಾನಂ ಇನ್ನೂ ಹಲವಾರು ಪುರುಷರೊಂದಿಗೆ ಲವ್ವಿಡವ್ವಿ ನಡೆಸುತ್ತಿದ್ದು, ಪ್ರೀತಿಯ ಹೆಸರಿನಲ್ಲಿ ವಂಚಿಸುವ ಮಾದರಿ ಮುಂದುವರಿಸುತ್ತಿದ್ದಾಳೆ ಎಂಬ ಆರೋಪಗಳು ಮುಂದುವರಿದಿವೆ.

ಈ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕೆಂದು ಇದ್ರೀಸ್ ಹಾಗೂ ಅವರ ಪರ ವಕೀಲರು ಆಗ್ರಹಿಸಿದ್ದಾರೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago