Latest

ಪ್ರೇಮ ಮತ್ತು ಮದುವೆಯ ಹೆಸರಿನಲ್ಲಿ ವಂಚನೆ – ಮಹಿಳೆ ವಿರುದ್ಧ ಪ್ರಕರಣ ದಾಖಲು

ತುಮಕೂರು: ಪ್ರೀತಿ, ಪ್ರೇಮ, ಹಾಗೂ ಮದುವೆ ಹೆಸರಿನಲ್ಲಿ ಪುರುಷರನ್ನು ವಂಚಿಸುತ್ತಿದ್ದ ಫಾರ್ಹಾ ಖಾನಂ (29) ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣದ ದುರೋಪಯೋಗ

ಫಾರ್ಹಾ ಖಾನಂ ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸುತ್ತಿದ್ದಳು. ಸ್ನೇಹ ಒಡಂಬಡಿಕೆಯಾಗುತ್ತಿದ್ದಂತೆ, ಅವರನ್ನು ನಂಬಿಸಲು ಪ್ರೀತಿಯ ನಾಟಕವಾಡುತ್ತಿದ್ದಳು. ಬಳಿಕ ಹನಿಟ್ರ್ಯಾಪ್ ರಚಿಸಿ ಹಣ ಹಾಗೂ ಆಭರಣ ವಂಚಿಸುತ್ತಿದ್ದಾಳೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾಳೆ.

ಇದ್ರೀಸ್ ಮತ್ತು ಫಾರ್ಹಾ ಖಾನಂ ವಿವಾಹ

2014ರಲ್ಲಿ ತುಮಕೂರಿನ ಇದ್ರೀಸ್ ಎಂಬುವವರು ಫಾರ್ಹಾ ಖಾನಂನನ್ನು ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದರು. ಇದ್ರೀಸ್‌ಗೆ ಈ ಮದುವೆ ಎರಡನೇದು; ಮೊದಲ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣದಿಂದಾಗಿ ಅವರು ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಮದುವೆಯ ಎಲ್ಲಾ ಖರ್ಚನ್ನು ಇದ್ರೀಸ್ ನೋಡಿಕೊಂಡಿದ್ದರೂ, ಕೇವಲ 27 ದಿನಗಳ ಸಂಸಾರದ ಬಳಿಕ, ಫಾರ್ಹಾ ಖಾನಂ ವರಸೆ ಬದಲಿಸಿ ವಂಚನಾ ಆಟವಾಡಿದಳು.

ಹಳೆಯ ಸಂಬಂಧ ಹಾಗೂ ವಂಚನೆ

ಇದ್ರೀಸ್‌ಗಿಂತ ಮುಂಚೆಯೇ ಫಾರ್ಹಾ ಖಾನಂ ಜಾಕೀರ್ ಎಂಬುವವರನ್ನು ಮದುವೆಯಾಗಿದ್ದಳು. ಆದರೆ, ಇದನ್ನು ಈತನಿಗೆ ತಿಳಿಸದೆ, ತಾನೊಬ್ಬ ದಿವ್ಯಾಂಗ ಮಹಿಳೆ ಎಂದು ನಂಬಿಸಿದ್ದಳು. ಮದುವೆಯ ನಂತರವೂ, ಫಾರ್ಹಾ ಖಾನಂ ತನ್ನ ಮೊದಲ ಪತಿಯೊಂದಿಗೆ ಗುಪ್ತವಾಗಿ ಸಂಪರ್ಕದಲ್ಲಿದ್ದಳು. ಇದನ್ನು ಕಂಡು ಇದ್ರೀಸ್ ಪ್ರಶ್ನೆ ಮಾಡುತ್ತಿದ್ದಂತೆ, ಗಲಾಟೆ ಮಾಡಿ ಅವನನ್ನು ಮನೆಯಿಂದಲೇ ಹೊರಹಾಕಿದಳು.

ಪೊಲೀಸರ ಮೇಲೆ ಅನ್ಯಾಯದ ಆರೋಪ

ಇದ್ರೀಸ್ ತಮ್ಮ ಹಕ್ಕುಗಳಿಗಾಗಿ ಪೊಲೀಸರಿಗೆ ದೂರು ನೀಡಿದರೂ, ಸರಿಯಾದ ತನಿಖೆ ನಡೆಸದೇ, ಫಾರ್ಹಾ ಖಾನಂ ಪರ ವಲಿದು ವರದಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದ್ರೀಸ್ ತಾನು ಮದುವೆ ಸಂದರ್ಭದಲ್ಲಿ ನೀಡಿದ ಹಣ ಮತ್ತು ಚಿನ್ನಾಭರಣವನ್ನು ವಾಪಸ್ ನೀಡುವಂತೆ ಒತ್ತಾಯಿಸಿದ್ದರೂ, ಇದಕ್ಕೆ ಪ್ರತಿಯಾಗಿ ಫಾರ್ಹಾ ಖಾನಂ ಗೂಂಡಾಗಳನ್ನು ಕಳುಹಿಸಿ ಅವರ ಮೇಲೆ ಹಲ್ಲೆ ಮಾಡಿಸಿದ್ದಾಳೆ.

ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ

ಪೊಲೀಸರ ನಿರ್ಲಕ್ಷ್ಯದಿಂದ ನ್ಯಾಯ ದೊರಕದೆ ಇರುವುದರಿಂದ, ಇದ್ರೀಸ್ ಇದೀಗ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ಲದೇ, ಫಾರ್ಹಾ ಖಾನಂ ಇನ್ನೂ ಹಲವಾರು ಪುರುಷರೊಂದಿಗೆ ಲವ್ವಿಡವ್ವಿ ನಡೆಸುತ್ತಿದ್ದು, ಪ್ರೀತಿಯ ಹೆಸರಿನಲ್ಲಿ ವಂಚಿಸುವ ಮಾದರಿ ಮುಂದುವರಿಸುತ್ತಿದ್ದಾಳೆ ಎಂಬ ಆರೋಪಗಳು ಮುಂದುವರಿದಿವೆ.

ಈ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕೆಂದು ಇದ್ರೀಸ್ ಹಾಗೂ ಅವರ ಪರ ವಕೀಲರು ಆಗ್ರಹಿಸಿದ್ದಾರೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago