Latest

ಪ್ರೇಮ ಮತ್ತು ಮದುವೆಯ ಹೆಸರಿನಲ್ಲಿ ವಂಚನೆ – ಮಹಿಳೆ ವಿರುದ್ಧ ಪ್ರಕರಣ ದಾಖಲು

ತುಮಕೂರು: ಪ್ರೀತಿ, ಪ್ರೇಮ, ಹಾಗೂ ಮದುವೆ ಹೆಸರಿನಲ್ಲಿ ಪುರುಷರನ್ನು ವಂಚಿಸುತ್ತಿದ್ದ ಫಾರ್ಹಾ ಖಾನಂ (29) ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣದ ದುರೋಪಯೋಗ

ಫಾರ್ಹಾ ಖಾನಂ ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸುತ್ತಿದ್ದಳು. ಸ್ನೇಹ ಒಡಂಬಡಿಕೆಯಾಗುತ್ತಿದ್ದಂತೆ, ಅವರನ್ನು ನಂಬಿಸಲು ಪ್ರೀತಿಯ ನಾಟಕವಾಡುತ್ತಿದ್ದಳು. ಬಳಿಕ ಹನಿಟ್ರ್ಯಾಪ್ ರಚಿಸಿ ಹಣ ಹಾಗೂ ಆಭರಣ ವಂಚಿಸುತ್ತಿದ್ದಾಳೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾಳೆ.

ಇದ್ರೀಸ್ ಮತ್ತು ಫಾರ್ಹಾ ಖಾನಂ ವಿವಾಹ

2014ರಲ್ಲಿ ತುಮಕೂರಿನ ಇದ್ರೀಸ್ ಎಂಬುವವರು ಫಾರ್ಹಾ ಖಾನಂನನ್ನು ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದರು. ಇದ್ರೀಸ್‌ಗೆ ಈ ಮದುವೆ ಎರಡನೇದು; ಮೊದಲ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣದಿಂದಾಗಿ ಅವರು ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಮದುವೆಯ ಎಲ್ಲಾ ಖರ್ಚನ್ನು ಇದ್ರೀಸ್ ನೋಡಿಕೊಂಡಿದ್ದರೂ, ಕೇವಲ 27 ದಿನಗಳ ಸಂಸಾರದ ಬಳಿಕ, ಫಾರ್ಹಾ ಖಾನಂ ವರಸೆ ಬದಲಿಸಿ ವಂಚನಾ ಆಟವಾಡಿದಳು.

ಹಳೆಯ ಸಂಬಂಧ ಹಾಗೂ ವಂಚನೆ

ಇದ್ರೀಸ್‌ಗಿಂತ ಮುಂಚೆಯೇ ಫಾರ್ಹಾ ಖಾನಂ ಜಾಕೀರ್ ಎಂಬುವವರನ್ನು ಮದುವೆಯಾಗಿದ್ದಳು. ಆದರೆ, ಇದನ್ನು ಈತನಿಗೆ ತಿಳಿಸದೆ, ತಾನೊಬ್ಬ ದಿವ್ಯಾಂಗ ಮಹಿಳೆ ಎಂದು ನಂಬಿಸಿದ್ದಳು. ಮದುವೆಯ ನಂತರವೂ, ಫಾರ್ಹಾ ಖಾನಂ ತನ್ನ ಮೊದಲ ಪತಿಯೊಂದಿಗೆ ಗುಪ್ತವಾಗಿ ಸಂಪರ್ಕದಲ್ಲಿದ್ದಳು. ಇದನ್ನು ಕಂಡು ಇದ್ರೀಸ್ ಪ್ರಶ್ನೆ ಮಾಡುತ್ತಿದ್ದಂತೆ, ಗಲಾಟೆ ಮಾಡಿ ಅವನನ್ನು ಮನೆಯಿಂದಲೇ ಹೊರಹಾಕಿದಳು.

ಪೊಲೀಸರ ಮೇಲೆ ಅನ್ಯಾಯದ ಆರೋಪ

ಇದ್ರೀಸ್ ತಮ್ಮ ಹಕ್ಕುಗಳಿಗಾಗಿ ಪೊಲೀಸರಿಗೆ ದೂರು ನೀಡಿದರೂ, ಸರಿಯಾದ ತನಿಖೆ ನಡೆಸದೇ, ಫಾರ್ಹಾ ಖಾನಂ ಪರ ವಲಿದು ವರದಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದ್ರೀಸ್ ತಾನು ಮದುವೆ ಸಂದರ್ಭದಲ್ಲಿ ನೀಡಿದ ಹಣ ಮತ್ತು ಚಿನ್ನಾಭರಣವನ್ನು ವಾಪಸ್ ನೀಡುವಂತೆ ಒತ್ತಾಯಿಸಿದ್ದರೂ, ಇದಕ್ಕೆ ಪ್ರತಿಯಾಗಿ ಫಾರ್ಹಾ ಖಾನಂ ಗೂಂಡಾಗಳನ್ನು ಕಳುಹಿಸಿ ಅವರ ಮೇಲೆ ಹಲ್ಲೆ ಮಾಡಿಸಿದ್ದಾಳೆ.

ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ

ಪೊಲೀಸರ ನಿರ್ಲಕ್ಷ್ಯದಿಂದ ನ್ಯಾಯ ದೊರಕದೆ ಇರುವುದರಿಂದ, ಇದ್ರೀಸ್ ಇದೀಗ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ಲದೇ, ಫಾರ್ಹಾ ಖಾನಂ ಇನ್ನೂ ಹಲವಾರು ಪುರುಷರೊಂದಿಗೆ ಲವ್ವಿಡವ್ವಿ ನಡೆಸುತ್ತಿದ್ದು, ಪ್ರೀತಿಯ ಹೆಸರಿನಲ್ಲಿ ವಂಚಿಸುವ ಮಾದರಿ ಮುಂದುವರಿಸುತ್ತಿದ್ದಾಳೆ ಎಂಬ ಆರೋಪಗಳು ಮುಂದುವರಿದಿವೆ.

ಈ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕೆಂದು ಇದ್ರೀಸ್ ಹಾಗೂ ಅವರ ಪರ ವಕೀಲರು ಆಗ್ರಹಿಸಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

13 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago