Latest

ನಕಲಿ ನೋಟುಗಳಿಂದ ಕೋಟಿಗಳ ವಂಚನೆ: ಹುಬ್ಬಳ್ಳಿಯಲ್ಲಿ ಒಂದನೇ ಹಂತದ ಆರೋಪಿಯ ಬಂಧನ

ಮೈಸೂರು ಮೂಲದ ಎ. ಮೊಹಮ್ಮದ್ ಆಸೀಫ್ ಎಂಬಾತನೇ, “ಸುಧೀರ ಮೆಹ್ತಾ” ಎಂಬ ಭ್ರಾಂತಿಕಾರಕ ಹೆಸರಿನಲ್ಲಿ ಮಹಿಳೆಯೊಬ್ಬರೊಂದಿಗೆ ವ್ಯಾಪಾರದ ಹೆಸರಿನಲ್ಲಿ ವಂಚನೆ ನಡೆಸಿದ್ದಾನೆ. ಕಡಿಮೆ ಬಡ್ಡಿದರದಲ್ಲಿ ಹಣದ ನೆರವು ನೀಡುತ್ತೇನೆ ಎಂದು ನಂಬಿಸಿ, ನಕಲಿ ನೋಟುಗಳನ್ನು ಉಪಯೋಗಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಆಸೀಫ್ ತನಗೆ ಹಣ ನೀಡಿದ ಮಹಿಳೆಗೆ ಪ್ರಥಮ ಹಂತದಲ್ಲಿ 1 ಕೋಟಿ 87 ಲಕ್ಷ 45 ಸಾವಿರ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ನೀಡಿದ್ದ. ಪೊಲೀಸರು ಈ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಜೊತೆಗೆ 500 ರೂ. ಮುಖಬೆಲೆಯ 5,000 ರೂ. ಅಸಲಿ ನೋಟುಗಳು, ಸುಮಾರು 4 ಲಕ್ಷ ಮೌಲ್ಯದ ಕಾರು ಹಾಗೂ ಎರಡು ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣದ ವಿವರಗಳ ಬಗ್ಗೆ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, “ಪುಣೆ ಮೂಲದ ಅಶ್ವಿನಿ ಪೆದ್ದವಾಡ ಎಂಬವರ ಮಗಳ ಕನ್‌ಸ್ಟ್ರಕ್ಷನ್ ವ್ಯವಹಾರಕ್ಕೆ ಹಣ ನೀಡುವುದಾಗಿ ಆಸೀಫ್ ಭರವಸೆ ನೀಡಿದ್ದ. ಖಾಸಗಿ ಮೂಲಗಳಿಂದ 50 ಕೋಟಿ ರೂ. ಹೂಡಿಕೆಗೆ ಸಾಧ್ಯವಿದೆ ಎಂದು ಹೇಳಿ, ಮೊದಲ ಹಂತದಲ್ಲಿ 60 ಲಕ್ಷ ರೂ. ಪ್ರೊಸೆಸಿಂಗ್ ಫೀಸಾಗಿ ಪಡೆದು, ಪ್ರತಿಯಾಗಿ ನಕಲಿ ನೋಟುಗಳನ್ನು ನೀಡಿದ್ದಾರೆ,” ಎಂದು ತಿಳಿಸಿದ್ದಾರೆ.

ವ್ಯವಹಾರವನ್ನು ಮುಟ್ಟುಗೋಲು ಮಾಡಲು ಹುಬ್ಬಳ್ಳಿಯನ್ನು ಮಧ್ಯವರ್ತಿ ಸ್ಥಳವನ್ನಾಗಿ ಆಯ್ಕೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮತ್ತೊಬ್ಬರು ವಂಚನೆಗೆ ಒಳಗಾಗಿರುವ ಸಾಧ್ಯತೆ ಇರುವುದರಿಂದ, ಯಾವುದೇ ವ್ಯಕ್ತಿ ಇಂತಹ ವಂಚನೆಯ ಗೆರೆಗೂಳಿದಿದ್ದರೆ, ಅವರು ತಕ್ಷಣವೇ ಪೊಲೀಸರಿಗೆ ದೂರು ನೀಡುವಂತೆ ಮನವಿ ಮಾಡಲಾಗಿದೆ.

ವಿಚಾರಣೆ ಮತ್ತು ಬಂಧನ ಕಾರ್ಯಾಚರಣೆಯಲ್ಲಿ ಸಿಸಿಬಿ ಸಹಾಯಕ ಪೊಲೀಸ್ ಆಯುಕ್ತ ಎಸ್.ಟಿ. ಓಡೆಯರ್, ಇನ್‌ಸ್ಪೆಕ್ಟರ್ ಮಾರುತಿ ಗುಳ್ಳಾರಿ, ಪಿಎಸ್‌ಐ ಪುನೀತಕುಮಾರ್, ಟಿ.ಎಂ. ಮಂಜುನಾಥ, ಡಿ. ರೂಪಕ್ ಹಾಗೂ ಸಿಬ್ಬಂದಿಗಳಾದ ಎಂ.ಬಿ. ಪಾಟೀಲ, ಎಂ.ಡಿ. ಬಡಿಗೇರ, ಎಂ.ಬಿ. ಭಜಂತ್ರಿ, ಎಸ್.ಎಸ್. ಪಾಂಡೆ ಸಹಭಾಗಿಯಾಗಿದ್ದರು.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

6 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

12 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

12 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago